ಹೈಕೋರ್ಟ್ಗೆ ಬಾಂಬ್ ಬೆದರಿಕೆ! ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಕೋರ್ಟ್ಗಳಲ್ಲಿ ತಪಾಸಣೆ
Bomb threat to High Court! Inspections conducted in all courts in Uttara Kannada district
ಮುಂಡಗೋಡ 07: ಧಾರವಾಡ ಉಚ್ಚ ನ್ಯಾಯಾಲಯ ಪೀಠ, ಬಾಗಲಕೋಟೆ ಹಾಗೂ ಮೈಸೂರು ಜಿಲ್ಲಾ ನ್ಯಾಯಾಲಯಗಳನ್ನು ಮಂಗಳವಾರ ಮಧ್ಯಾಹ್ನ 1.55ರ ವೇಳೆಗೆ ಖಾಲಿ ಮಾಡಿಸಿ ಬಾಂಬ್ ಸ್ಫೋಟ ಅಥವಾ ಆತ್ಮಾಹುತಿ ಬಾಂಬ್ ದಾಳಿ ನಡೆಸುವ ಸಾಧ್ಯತೆ ಇದೆ ಎಂಬ ಬೆದರಿಕೆ ಇ-ಮೇಲ್ ಮೂಲಕ ಹೈಕೋರ್ಟ್ನ ಎಆರಿ್ಜ (ಂಖಉ) ಗೆ ಬಂದ ಹಿನ್ನೆಲೆಯಲ್ಲಿ, ಹೈಕೋರ್ಟ್ ಪೀಠ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳದಿಂದ ತೀವ್ರ ತಪಾಸಣೆ ನಡೆಸಲಾಯಿತು.
ಈ ಹಿನ್ನೆಲೆಯಲ್ಲಿ ಮುಂಡಗೋಡ ಜೆಎಂಎಂಸಿ ನ್ಯಾಯಾಲಯಕ್ಕೆ ಆಗಮಿಸಿದ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳವು ನ್ಯಾಯಾಲಯದ ಪ್ರತಿಯೊಂದು ಭಾಗ, ಮೂಲೆಮೂಲೆ ಹಾಗೂ ಹೊರ ಆವರಣದ ಎಲ್ಲಾ ಪ್ರದೇಶಗಳನ್ನು ಸೂಕ್ಷ್ಮವಾಗಿ ಪರೀಶೀಲಿಸಿತು. ಇದೇ ರೀತಿಯಲ್ಲಿ ಜಿಲ್ಲೆಯ ಇತರೆ ನ್ಯಾಯಾಲಯಗಳಲ್ಲಿಯೂ ಪರೀಶೀಲನೆ ನಡೆಸಲಾಯಿತು.
ಈ ವೇಳೆಗೆ ಎ ಆರ್ ಎಸ್ ಐ ಸಂಜಯ ಭೋವಿ, ಎ ಆರ್ ಎಸ್ ಐ ಜಗನ್ನಾಥ ನಾಯ್ಕ್, ಆನಂದ ನಾಯ್ಕ್, ಸಂತೋಷ್ ನಾಯ್ಕ್, ಮಹೇಶ್ ನಾಯ್ಕ್, ಮಾಬ್ಲು ಗೌಡ, ನಿತ್ಯ ಗೌಡ, ಪ್ರಶಾಂತ್ ಮತ್ತು ಡಾಗ್ ಅಣಶಿ ಪರೀಶೀಲನೆ ಕಾರ್ಯಾಚರಣೆಯಲ್ಲಿ ಉಪಸ್ಥಿತರಿದ್ದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 