ಲಂಚ ಸ್ವೀಕಾರ ಕಿರಣ ತೇರದಾಳ ಎಸಿಬಿ ಬಲಿಗೆ
ಶಿಗ್ಗಾವಿ 20: ಬಂದಿಖಾನೆಯಲ್ಲಿರುವ ಕೈದಿಗಳಿಗೆ ನಿತ್ಯ ಊಟ ಸರುಬುರಾಜು ಮಾಡುತ್ತಿದ್ದ ಶಿಗ್ಗಾವಿ ಪಟ್ಟಣದ ರೇಣುಕಾ ಹೊಟೇಲ್ ಮಾಲೀಕರಿಗೆ ಊಟದ ಬಿಲ್ ಪಾವತಿಸಲು ಕಂದಾಯ ಇಲಾಖೆ ದಾಖಲೆ ಕೋಠಡಿ ಕ್ಲಕರ್್, ಬಂಧಿಖಾನೆ ಜೈಲರ್ ಕಿರಣ ತೇರದಾಳ ಎಂಬವರು 75 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲಿಗೆ ಬಿದ್ದ ಪ್ರಸಂಗ ಮಂಗಳವಾರ ನಡೆದಿದೆ.
ಹೊಟೇಲ್ ಮಾಲೀಕ ಶಂಕ್ರಪ್ಪ ಯಲ್ಲಪ್ಪ ಗೌಳಿ ಅವರಿಗೆ 2017 ರಿಂದ ಕೈದಿಗಳಿಗೆ ಊಟ ಸರುಬುರಾಜ ಮಾಡಿದ್ದ 6 ಲಕ್ಷ ರೂ. ಬಿಲ್ ಪಾವತಿಸಲು 1 ಲಕ್ಷ ರೂ.ಲಂಚದ ಹಣ ಕೇಳಿದ್ದಾರೆ ಎಂದು ಎಸಿಬಿ ಅಧಿಕಾರಿಗಳಿಗೆ ಗೌಳಿ ಅವರು ದೂರು ನೀಡಿದ್ದರು.
ದೂರು ದಾಖಲಿಸಿಕೊಂಡು ಎಸಿಬಿ ಡಿವೈಎಸ್ಪಿ ಪ್ರಲ್ಹಾದ ಎಸ್.ಕೆ., ಅವರ ನೇತೃತ್ವದಲ್ಲಿ ಕೈಗೊಂಡ ದಾಳಿ ವೇಳೆ ಹಣ ಪಡೆಯತ್ತಿದ್ದಾಗ ಕಿರಣ ತೇರದಾಳ ಸಿಕ್ಕು ಬಿದ್ದಿದ್ದಾರೆ.
ಲಂಚದ ಹಣ ಪಡೆಯತ್ತಿದ್ದ ತೇರದಾಳ ಅವರನ್ನು ಬಂದಿಸಿದ್ದೇವೆ. ಘಟನೆ ಕುರಿತು ಕೈಗೊಳ್ಳಲಾದ ತನಿಖೆ ಪೂರ್ಣಗೊಂಡ ಬಳಿಕ ಸಂಜೆ ನ್ಯಾಯಾಧಿಶರ ಮುಂದೆ ಹಾಜರು ಪಡಿಸುವುದಾಗಿ ಎಸಿಬಿ ಡಿವೈಎಸ್ಪಿ ಪ್ರಲ್ಹಾದ ಎಸ್.ಕೆ. ತಿಳಿಸಿದ್ದಾರೆ.
ದಾಳಿಯಲ್ಲಿ ಇನ್ಸಪೆಕ್ಟರ್ಗಳಾದ ಬಸವರಾಜ ಹಳಬಣ್ಣ, ಸುದರ್ಶನ ಸೇರಿದಂತೆ ಎಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 