ಬಜೆಟ್ ನಲ್ಲಿ ಬಹುಸಂಖ್ಯಾತರಿಗೆ ಅನ್ಯಾಯ: ನಾಗೇಶ ಹೆಗಡ್ಯಾಳ

ಬಜೆಟ್ ನಲ್ಲಿ ಬಹುಸಂಖ್ಯಾತರಿಗೆ ಅನ್ಯಾಯ: ನಾಗೇಶ ಹೆಗಡ್ಯಾಳ Budget is unfair to the majority: Nagesh Hegdyala


ಲೋಕದರ್ಶನ ವರದಿ  

ಇಂಡಿ 06 :  ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು  2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಬಹುಸಂಖ್ಯಾತರಿಗೆ  ಅನ್ಯಾಯವಾಗಿದೆ ಎಂದು ಇಂಡಿ ತಾಲೂಕಿನ ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸನಾತನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹಾಗೂ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಯಾವುದೇ ರೀತಿಯ ಅನುದಾನ ಮೀಸಲಿಟ್ಟಿಲ್ಲ, ಉತ್ತರ ಕರ್ನಾಟಕದ ಪ್ರವಾಸೋದ್ಯಮ ಹಾಗೂ ನೀರಾವರಿ ಯೋಜನೆಗಳಿಗೆ ಮಹತ್ವ ನೀಡಿಲ್ಲ. ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಹೇಳಿದರು.ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆದಾಯ ಕಡಿಮೆಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಕಡಿವಾಣ ಹಾಕಿ ಆರ್ಥಿಕ ಶಿಸ್ತು ಪಾಲನೆಗೆ ಬಜೆಟ್ ನಲ್ಲಿ ಒತ್ತು ನೀಡಬೇಕಿತ್ತು. ಎಂದು ಹೇಳಿದರು.