ಬಸ್ ಚಾಲಕನ ಸಮಯ ಪ್ರಜ್ಞೆ: ತಪ್ಪಿದ ಅವಘಡ
ಉಗಾರ-ಅಥಣಿ ಮಾರ್ಗದ ಮೋಳೆ ಹಳ್ಳದ ಹತ್ತಿರ ಸಂಭವಿಸಿದ ಅಪಘಾತದಲ್ಲಿ ಗದ್ದೆಯಲ್ಲಿ ಹೋದ ನಿಂತ ಅಥಣಿ ಡಿಪೊ ಬಸ್.
ಕಾಗವಾಡ 30: ಅಥಣಿಯಿಂದ ಉಗಾರಕ್ಕೆ ಬರುವ ಅಥಣಿ ಡಿಪೊ ಬಸ್ಸ ವೇಗವಾಗಿ ಹೋಗುತ್ತಿರುವಾಗ ಬಸ್ಸಿನ ಪಾಟಾ ಮುರೆದ ಪರಿಣಾಮ ಮೋಳೆ ಹಳ್ಳದಲ್ಲಿ ಉರುಳುವ ಸಮಯದಲ್ಲಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಪಕ್ಕದ ಕಬ್ಬಿನ ಗದ್ದೆಯಲ್ಲಿ ಬಸ್ಸು ಸಿಲುಕಿಸಿ ಸಂಭವಿಸುವ ಅವಘಡ ತಪ್ಪಿಸಿದ ಘಟಣೆ ಉಗಾರ-ಅಥಣಿ ಮಾರ್ಗದ ಮೋಳೆ ಹಳ್ಳದ ಹತ್ತಿರ ಸಂಭವಿಸಿದೆ.
ಗುರುವಾರ ಮಧ್ಯಾಹ್ನ ಅಥಣಿ ಡಿಪೊ ಬಸ್ಸ್ ಉಗಾರಕ್ಕೆ ಬರುವಾಗ ಮೋಳೆ ಹಳ್ಳದ ಹತ್ತಿರ ಬಸ್ಸಿನ ಪಾಟಾ ಆಕಸ್ಮಿಕವಾಗಿ ಮುರಿಯಿತು. ಬಸ್ ಚಾಲಕನಾದ ಜೆ.ಎಸ್.ಚಾಕರಿ ಇವರು ವೇಗವಾಗಿ ಓಡುವ ಬಸ್ಸವನ್ನು ಕಬ್ಬಿನ ಗದ್ದೆಗೆ ತಿರುಗಿಸಿ, ಆಗುವ ಅನಾಹುತ ತಪ್ಪಿಸಿದ್ದಾರೆ,
ಆಳವಾದ ಹಳ್ಳದಲ್ಲಿ ಬಸ್ ಉರುಳುವ ಸಾಧ್ಯತೆಯಿತ್ತು. ಬಸ್ಸಿನಲ್ಲಿ 13 ಪ್ರಯಾಣಿಕರಿದ್ದರು. ಇದರಲ್ಲಿಯ ಸುಶೀಲಾ ಅಂಬಿ, ರೂಪಾಲಿ ಅಂಬಿ(ಕುಡಚಿ), ಲತಾ ಕಸಕ್ತಿ(ಕೃಷ್ಣಾ ಕಿತ್ತುರ), ಮಹಾದೇವಿ ಬಾಗಡಿ, ಭಿಮಪ್ಪಾ ಬಾಗಡಿ(ಅಥಣ) ಇವರಿಗೆ ಸಣ್ಣು ಪುಟ್ಟ ಗಾಯಗಳು ಆಗಿದ್ದು, ಚಿಕಿತ್ಸೆಗೆ ಅಥಣಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಥಣಿ ಡಿಪೊ ಕಂಟ್ರೊಲರ್ ವೈ.ಕೆ.ಉಪ್ಪಾರ ಭೇಟಿನೀಡಿ ಪ್ರಯಾಣಿಕರಿಗೆ ಶಾಂತಿ ಹೇಳಿದ್ದಾರೆ. ಬಸ್ ಕಂಡಕ್ಟರ್ ಸುನೀಲ ಗಾಡಿವಡ್ಡರ ಮತ್ತು ಚಾಲಕರಿಗೆ ಯಾವುದೇ ಗಾಯಗಳಾಗಿಲ್ಲಾ ಎಂದು ಕಂಟ್ರೋಲರ್ ವೈ.ಕೆ.ಉಪ್ಪಾರ ಹೇಳಿದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 