ಹಿಟ್ನಾಳರಿಂದ ಬೆಟಗೇರಿ-ಅಳವಂಡಿ ಏತ ನೀರಾವರಿ ಯೋಜನೆ ಕಾಮಗಾರಿ ವೀಕ್ಷಣೆ
ಕೊಪ್ಪಳ 01: ಕನರ್ಾಟಕ ಸಕರ್ಾರದ ಸಂಸದೀಯ ಕಾರ್ಯದಶರ್ಿ ಹಾಗೂ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಶನಿವಾರದಂದು ಕೊಪ್ಪಳ ತಾಲೂಕಿನ ಹನಕುಂಟಿ ಗ್ರಾಮದಲ್ಲಿ ನಡೆಯುತ್ತಿರುವ ``ಬೆಟಗೇರಿ ಏತ ನೀರಾವರಿ ಯೋಜನೆ'' ಕಾಮಗಾರಿಯನ್ನು ವೀಕ್ಷಿಸಿದರು.
ಕಾಮಗಾರಿ ಕಾರ್ಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಕನರ್ಾಟಕ ಸಕರ್ಾರದ ಸಂಸದೀಯ ಕಾರ್ಯದಶರ್ಿ ಹಾಗೂ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಮಾತನಾಡಿ, ಬೇಟಗೇರಿ ಏತ ನೀರಾವರಿ ಯೋಜನೆಯು ತುಂಗಭದ್ರ ನದಿಯ ಹಿನ್ನೀರಿನಿಂದ ಅಳವಂಡಿ, ಬೆಟಗೇರಿ ಸೇರಿದಂತೆ ವಿವಿದ ಗ್ರಾಮಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವಂತಹ ಮಹತ್ವದ ಯೋಜನೆ ಇದಾಗಿದೆ. ಶೇ.85 ಕ್ಕೂ ಅಧಿಕ ಪ್ರಮಾಣದಲ್ಲಿ ಕಾಮಗಾರಿಯೂ ಪೂರ್ಣಗೊಂಡಿದೆ. ಒಂದು ತಿಂಗಳ ಬಳಿಕ ಈ ಕಾರ್ಯವು ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ. ಯೋಜನೆಯಡಿ ರೈತರ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಅರ್ಹ ರೈತರಿಗೆ ಪರಿಹಾರ ಮೊತ್ತವನ್ನು ಶೀಘ್ರದಲ್ಲಿ ಒದಗಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ, ರಾಜಶೇಖರ ಹಿಟ್ನಾಳ ಸೇರಿ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 