ಸಿಇಓ ರವರಿಂದ ವಿವಿಧ ಕಾಮಗಾರಿಗಳ ಪರೀಶೀಲನೆ
CEO reviews various works
ಸಿಇಓ ರವರಿಂದ ವಿವಿಧ ಕಾಮಗಾರಿಗಳ ಪರೀಶೀಲನೆ
ಕಾರವಾರ 02: ಶಿರಸಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲೀಷ್ ಶಶಿ ಅವರು ಭೇಟಿ ವಿವಿಧ ಕಾಮಗಾರಿಗಳ ಪರೀಶೀಲನೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪುನಶ್ಚೇತನಗೊಳಿಸಲಾದ ಕಲಗಾರ್ ಗ್ರಾಮದ ಕಲ್ಯಾಣಿ ಕಾಮಗಾರಿ ಪರೀಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನೂ ಕಡಕೋಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಗತಿಯಲ್ಲಿರುವ ಅಡುಗೆಕೋಣೆ ಕಾಮಗಾರಿಯನ್ನು ಪರೀಶೀಲಿಸಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಬಿಸಿಯೂಟ ತಯಾರಿಕೆಗೆ ಅನುವು ಮಾಡಿಕೊಡುವಂತೆ ಸೂಚಿಸಿದರು. ಈ ವೇಳೆ ಅಂಗನವಾಡಿ ಕೇಂದ್ರ ಹಾಗೂ ಶಾಲಾ ಕೊಠಡಿಗಳಲ್ಲಿ ಮಕ್ಕಳೊಂದಿಗೆ ಸಂವಹನ ನಡೆಸಿದರು.
ಹುಲೇಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಟ್ಟಡ ಹಾಗೂ ಅಲ್ಲಿನ ಸುವ್ಯವಸ್ಥೆ ಕುರಿತು ಪರೀಶೀಲಿಸಿ ಕುಂದುಕೊರತೆ ಬಗ್ಗೆ ಮಾಹಿತಿ ಪಡೆದರು. ಹಾಗೂ ಓಷಧಿ ಮಳಿಗೆಯಲ್ಲಿ ಅವಶ್ಯಕತೆಗೆ ತಕ್ಕಂತೆ ಓಷಧಿ ಪೂರೈಕೆ, ರೋಗಿಗಳಿಗೆ ಬೆಡ್ ವ್ಯವಸ್ಥೆ, ಚಿಕಿತ್ಸಾ ಸಲಕರಣೆಗಳನ್ನು ಪರೀಶೀಲಿಸಿ ಯಾವುದೇ ಕುಂದುಕೊರತೆಯಾಗದಂತೆ ಚಿಕಿತ್ಸೆ ನೀಡಲು ಸಿದ್ದರಿರಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಹುಲೇಕಲ್ ಗ್ರಾಮದಲ್ಲಿ ಸಂಜೀವಿನಿ ಒಕ್ಕೂಟದಡಿ ಕೈಗೊಳ್ಳಲಾದ ಎಣ್ಣೆ ಹಾಗೂ ಹಿಟ್ಟಿನ ಗಿರಣಿಗೆ ಭೇಟಿ ನೀಡಿ ಮಹಿಳೆಯರಿಗೆ ಅನುಕೂಲಒದಗಿಸುವ ನಿಟ್ಟಿನಲ್ಲಿ ಇಂತಹ ಅಭಿವೃದ್ಧಿ ಚಟುವಟಿಕೆಗಳು ಇನ್ನೂ ಹೆಚ್ಚು ಅನುಕೂಲ ಕಲ್ಪಿಸುವಂತಾಗಲಿ ಎಂದರು.
ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್ ಅಂಬೇಡ್ಕರ್ ಹೆಣ್ಣುಮಕ್ಕಳ ವಸತಿ ನಿಲಯದಲ್ಲಿ ಕಟ್ಟಡದಲ್ಲಿ ನೀರು ಸೋರಿಕೆ ತಡೆಗಟ್ಟಿ ಈ ಕುರಿತು ಶೀಘ್ರ ಮಾಹಿತಿಯನ್ನು ಜಿಲ್ಲಾ ಪಂಚಾಯತ್ಗೆ ನೀಡಲು ಸೂಚನೆ ನೀಡಿ, ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಬಿಸೀನೀರು, ಆಹಾರ ಪದಾರ್ಥಗಳನ್ನು ಪರೀಶೀಲಿಸಿ ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆಯಾಗದಂತೆ ಆಹಾರ ನೀಡಲು ತಿಳಿಸಿದರು.
ಉಂಚಳ್ಳಿ ಗ್ರಾಮ ಪಂಚಾಯತ್ ನ ಹೊಸ ಕಟ್ಟಡವನ್ನು ವೀಕ್ಷಿಸಿ ಪಂಚಾಯತ್ ಕಮಿಟಿ ಹಾಗೂ ಅಧಿಕಾರಿಗಳು ಸಿಬ್ಬಂದಿಗಳಿಗೆ ಅಭಿನಂದಿಸಿದರು. ಈ ವೇಳೆ ಸ್ವಚ್ಛ ಸಂಕೀರ್ಣ ಘಟಕದ ಸಿಬ್ಬಂದಿಗಳ ಕೆಲಸ ಹಾಗೂ ಗ್ರಂಥಾಲಯ ಅಭಿವೃದ್ಧಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಚನ್ನಬಸಪ್ಪ ಹಾವಣಗಿ, ಯೋಜನಾಧಿಕಾರಿ ಅಶೋಕ್ ನಾಯ್ಕ, ತಾ.ಪಂ ವ್ಯವಸ್ಥಾಪಕ ಸುಬ್ರಾಯ ಭಟ್, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 