ವಿದ್ಯಾರ್ಥಿ ಗಳ ಫಲಿತಾಂಶ ಸುಧಾರಣೆಗೆ ಸಿಇ ಟಿ ತರಬೇತಿ
CET training to improve student results
ಹೂವಿನ ಹಡಗಲಿ: 14- ಸರಕಾರಿ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಈ ಬಾರಿ ವಸತಿ ಸಹಿತ ಉಚಿತ ಸಿ ಇ ಟಿ ತರಬೇತಿಯನ್ನು ಇಲಾಖೆ ಆಯೋಜಿಸಿದೆ.ಎಲ್ಲಾ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಪ್ರಾಚಾರ್ಯ ಎ. ಕೊಟ್ರಗೌಡ ತಿಳಿಸಿದರು. ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸ.ಪ.ಪೂ. ಕಾಲೇಜಿನಲ್ಲಿ ಭಾನುವಾರ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆಯ ಭಾಗವಾಗಿ ಆಯೋಜಿಸಿದ್ದ ಜೀವಶಾಸ್ತ್ರ ವಿಷಯದ ಬೂಸ್ಟರ್ ತರಗತಿ ಉದ್ಘಾಟಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿ ಎಂ.ಎಂ.ಪಾಟೀಲ ಕಾಲೇಜಿನ ಪ್ರಾಚಾರ್ಯ ಡಿ. ಸತೀಶ್, ವಿದ್ಯಾರ್ಥಿಗಳಿಗೆ ಫಲಿತಾಂಶ ಸುಧಾರಣೆಗೆ ಒತ್ತುಕೊಟ್ಟು ಓದುವ ಬಗ್ಗೆ ಮಾರ್ಗದರ್ಶನ ಮಾಡಿದರು. ಜೊತೆಗೆ ಸಿ. ಇ. ಟಿ ತಯಾರಿ ಕುರಿತು ಉಪಯುಕ್ತವಾದ ಮಾಹಿತಿ ಒದಗಿಸಿದರು. ಉಪನ್ಯಾಸಕ ನಟರಾಜ್ ಪಾಟೀಲ್ ,ಶ್ರೀಕಾಂತ್, ದುಷ್ಯಂತ್, ವೀರೇಶ್, ಶಂಕರ್, ಪರಂಜ್ಯೋತಿ, ಉಮಾ, ರಶ್ಮಿ ಇದ್ದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 