ಅತಿ ಹೆಚ್ಚು ಸಾಲ ಮಾಡಿರುವ ಹೆಗ್ಗಳಿಕೆಗೆ ಪಾತ್ರ ಸಿಎಂ ಸಿದ್ದರಾಮಯ್ಯ: ಎಂ.ಬಿ.ಬಸವರಾಜ
CM Siddaramaiah deserves the title of having incurred the highest debt: M.B. Basavaraja
ಅತಿ ಹೆಚ್ಚು ಸಾಲ ಮಾಡಿರುವ ಹೆಗ್ಗಳಿಕೆಗೆ ಪಾತ್ರ ಸಿಎಂ ಸಿದ್ದರಾಮಯ್ಯ: ಎಂ.ಬಿ.ಬಸವರಾಜ
ಹೂವಿನಹಡಗಲಿ 13: ರಾಜ್ಯದ ಜನರ ತಲೆ ಮೇಲೆ ಲಕ್ಷ ಗಟ್ಟಲೇ ಸಾಲ ಹೊರಿಸಿ. ಬಡವರ ಪರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ದಿವಾಳಿ ಮಾಡಿದೆ ಎಂದು ವಿಜಯನಗರ ಜಿಲ್ಲಾ ಬಿಜೆಪಿ ಮುಖಂಡ ಎಂ.ಬಿ.ಬಸವರಾಜ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಪರದಾಡಿ ಬಿ ಖಾತಾ ಎಂಬ ಹೊಸ ಹಾವು ಬಿಟ್ಟು ಭಾರಿ ಮೊತ್ತದ ತೆರಿಗೆ ಸಂಗ್ರಹಿಸಲು ಹೋರಟಿದೆ. ಜನಸಾಮಾನ್ಯರಿಗೆ ತೆರಿಗೆ ಭಾಗ್ಯ ನೀಡಿದ್ದಾರೆ. ಅತಿ ಹೆಚ್ಚು ಸಾಲ ಮಾಡಿರುವ ಹೆಗ್ಗಳಿಕೆ ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಕಳೆದ ಎರಡು ವರ್ಷದಲ್ಲಿ ಸರ್ಕಾರ 2.21 ಲಕ್ಷ ಕೋಟಿ ಸಾಲ ಮಾಡಿದೆ. ಗೃಹಲಕ್ಷ್ಮಿಗೆ ಭಾರೀ ಪ್ರಮಾಣದಲ್ಲಿ 28 ಸಾವಿರ ಕೋಟಿ ಮೀಸಲಿಟ್ಟಿದ್ದಾರೆ.ರಾಜ್ಯ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಹಣ ಕಡಿತಗೊಳಿಸುವ ಮೂಲಕ ದಲಿತರ ಕಲ್ಯಾಣಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿದೆ. ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಯಾಮಾರಿಸುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ರಾಜ್ಯದ ಖಜಾನೆ ಖಾಲಿಯಾಗಿದೆ. ಸಾಲದ ಬಲೆಗೆ ಬಿದ್ದಿದೆ ಎಂದು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 