ಕೆರೆ ಹೂಳೆತ್ತುವ ಸ್ಥಳಕ್ಕೆ ಸಿ.ವಿ ಚಂದ್ರಶೇಖರ ಭೇಟಿ
ಲೋಕದರ್ಶನ ವರದಿ
ಕೊಪ್ಪಳ 18: ತಾಲೂಕಿನ ಶಿವಪುರ ಗ್ರಾಮದ ಕೆರೆ ಹೂಳೆತ್ತುವ ಸ್ಥಳಕ್ಕೆ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾದ ಸಿ.ವಿ ಚಂದ್ರಶೇಖರ ಅವರು ಭೇಟಿ ನೀಡಿದರು.
ನಂತರ ಸಿ.ವಿ ಚಂದ್ರಶೇಖರ ಮಾತನಾಡಿ ಇಂದು ಜಿಲ್ಲೆಯ ವಿವಿದೆಡೆ ಕೆರೆಯ ಹೂಳನ್ನು ರೈತರೇ ತೆಗೆಯುತ್ತಿದ್ದಾರೆ, ಸರಕಾರ ಮಾಡಬೇಕಾದ ಕೆಲಸವನ್ನು ರೈತರು ಮಾಡುತ್ತಿರುವುದು ಶ್ಲಾಘನೀಯ, ಸದಾ ನಾನು ನಿಮ್ಮ ಜೊತೆಯಲ್ಲಿ ಇದ್ದು ನನ್ನಿಂದಾಗುವ ಸೇವೆಯನ್ನು ಸಲ್ಲಿಸುತ್ತೇನೆ ಕೆರೆಯ ಹೂಳನ್ನು ತೆಗೆಯುವುದರಿಂದ ಅಂತರ್ಜಲ ಮಟ್ಟ ಹೆಚ್ಚುತ್ತದೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲವಾಗುತ್ತದೆ ಇಂತಹ ಸಾಮಾಜಿಕ ಕಾರ್ಯಗಳು ಹೀಗೆ ಹೆಚ್ಚಾಗಿ ಆಗಲಿ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಹಾಲೇಶ್ ಕಂದಾರಿ, ವಸಂತ ನಾಯಕ ಸೇರಿದಂತೆ ಮಂಜುನಾಥ ಹುಲಿಹೈದರ್, ಹನುಮೇಶ ಅಂಗೋಟಿ, ಮಂಜುನಾಥ ಶೇಲ್ಲೂಡಿ, ಮಾರುತಿ ನಾಯಕ್, ಬೀರಪ್ಪ ಶೇಲೂಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ಯುವಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 