ಕ್ಯಾಂಪಸ್ ಸಂದರ್ಶನ: ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ನ 12 ವಿದ್ಯಾರ್ಥಿಗಳು ಆಯ್ಕೆ
Campus interview: 12 students of Sanganabasava Mahaswamiji Polytechnic selected
ವಿಜಯಪುರ 13: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದ 12 ಜನ ವಿದ್ಯಾರ್ಥಿಗಳು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ. ಯಂತ್ರಗಳ ಉತ್ಪಾದಕ ಸಂಸ್ಥೆ ಡಿ ಎನ್ ಸೊಲುಶನ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿದ್ದಾರೆ.
ಡಿ. ಎನ್. ಸೊಲುಶನ್ಸ್ ಸಂಸ್ಥೆಯ ಬೆಂಗಳೂರು ವಿಭಾಗದ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ವಿಭಾಗದ ಸ್ಮೀತಾ ಆರ್. ಅವರು ಶುಕ್ರವಾರ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ನಡೆಸಿ ಆಯ್ಕೆಯಾದ 12 ಜನರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.
ಕಾಲೇಜಿನ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗ ವಿಭಾಗದ ಅಧಿಕಾರಿ ಸುಧನ್ವ, ವಿ. ಕುಲಕರ್ಣಿ, ಸಂತೋಷ ಹಿರೇಮಠ, ಪಾಂಡುರಂಗ ಅಸ್ಲಂಕರ್, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಎಂ. ಸಿ. ಬಿರಾದಾರ, ಕಂಪ್ಯೂಟರ ಸಾಯಿನ್ಸ್ ವಿಭಾಗದ ಮುಖ್ಯಸ್ಥ ಎಂ. ಎಸ್. ಬೇನಾಳ, ಸಿವ್ಹಿಲ್ ವಿಭಾಗದ ಮುಖ್ಯಸ್ಥೆ ಸುನಿತಾ ಲಕ್ಷಾಣಿ, ಇ ಮತ್ತು ಸಿ ವಿಭಾಗದ ಮುಖ್ಯಸ್ಥೆ ಸುರೇಖಾ ಸುಣಗಾ, ಇ ಮತ್ತು ಇ ವಿಭಾಗದ ಮುಖ್ಯಸ್ಥೆ ಸವಿತಾ ಜೋಶಿ ಹಾಗೂ ನಾನಾ ವಿಭಾಗಗಳ ಉದ್ಯೋಗ ವಿಭಾಗದ ಅಧಿಕಾರಿಗಳು, ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಬ. ಪಾಟೀಲ ಹಾಗೂ ಸಂಸ್ಥೆಯ ಎಲ್ಲ ಆಡಳಿತ ಮಂಡಳಿ ನಿರ್ದೇಶಕರು ಅಭಿನಂದನೆ ಸಲ್ಲಿಸಿದ್ದಾರೆ.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 