ಕ್ಯಾಂಪಸ್ ಸಂದರ್ಶನ: ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ನ 12 ವಿದ್ಯಾರ್ಥಿಗಳು ಆಯ್ಕೆ
Campus interview: 12 students of Sanganabasava Mahaswamiji Polytechnic selected
ವಿಜಯಪುರ 13: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದ 12 ಜನ ವಿದ್ಯಾರ್ಥಿಗಳು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ. ಯಂತ್ರಗಳ ಉತ್ಪಾದಕ ಸಂಸ್ಥೆ ಡಿ ಎನ್ ಸೊಲುಶನ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಉದ್ಯೋಗ ಗಿಟ್ಟಿಸಿದ್ದಾರೆ.
ಡಿ. ಎನ್. ಸೊಲುಶನ್ಸ್ ಸಂಸ್ಥೆಯ ಬೆಂಗಳೂರು ವಿಭಾಗದ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ವಿಭಾಗದ ಸ್ಮೀತಾ ಆರ್. ಅವರು ಶುಕ್ರವಾರ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ನಡೆಸಿ ಆಯ್ಕೆಯಾದ 12 ಜನರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.
ಕಾಲೇಜಿನ ಪ್ರಾಚಾರ್ಯ ಪ್ರಭುದೇವ ಬಿ. ಕಳಸಗೊಂಡ, ಉದ್ಯೋಗ ವಿಭಾಗದ ಅಧಿಕಾರಿ ಸುಧನ್ವ, ವಿ. ಕುಲಕರ್ಣಿ, ಸಂತೋಷ ಹಿರೇಮಠ, ಪಾಂಡುರಂಗ ಅಸ್ಲಂಕರ್, ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಎಂ. ಸಿ. ಬಿರಾದಾರ, ಕಂಪ್ಯೂಟರ ಸಾಯಿನ್ಸ್ ವಿಭಾಗದ ಮುಖ್ಯಸ್ಥ ಎಂ. ಎಸ್. ಬೇನಾಳ, ಸಿವ್ಹಿಲ್ ವಿಭಾಗದ ಮುಖ್ಯಸ್ಥೆ ಸುನಿತಾ ಲಕ್ಷಾಣಿ, ಇ ಮತ್ತು ಸಿ ವಿಭಾಗದ ಮುಖ್ಯಸ್ಥೆ ಸುರೇಖಾ ಸುಣಗಾ, ಇ ಮತ್ತು ಇ ವಿಭಾಗದ ಮುಖ್ಯಸ್ಥೆ ಸವಿತಾ ಜೋಶಿ ಹಾಗೂ ನಾನಾ ವಿಭಾಗಗಳ ಉದ್ಯೋಗ ವಿಭಾಗದ ಅಧಿಕಾರಿಗಳು, ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ ಮತ್ತು ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಬ. ಪಾಟೀಲ ಹಾಗೂ ಸಂಸ್ಥೆಯ ಎಲ್ಲ ಆಡಳಿತ ಮಂಡಳಿ ನಿರ್ದೇಶಕರು ಅಭಿನಂದನೆ ಸಲ್ಲಿಸಿದ್ದಾರೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 