19 ರಿಂದ ಬೆಳಗಾವಿ, ಮಣಗೂರು ನಡುವೆ ಸಂಚರಿಸುವ ರೈಲ್ವೆ ರದ್ದು- ಖಂಡನೀಯ
Cancellation of railway running between Belgaum and Mangur from 19th - Condemnable
19 ರಿಂದ ಬೆಳಗಾವಿ, ಮಣಗೂರು ನಡುವೆ ಸಂಚರಿಸುವ ರೈಲ್ವೆ ರದ್ದು- ಖಂಡನೀಯ
ಹೊಸಪೇಟೆ 12: ನೈರುತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳ ತಂಡ ಹೊಸಪೇಟೆ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ಅಮೃತ್ ಭಾರತ್ ಯೋಜನೆ ಅಡಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಪರೀವೀಕ್ಷಣೆ ನಡೆಸಿತು.
ನಂತರ ನಗರದ ಹಂಪಿ ರಸ್ತೆಯಲ್ಲಿರುವ ವಿಜಯಶ್ರೀ ಹೆರಿಟೇಜ್ಗೆ ಆಗಮಿಸಿದ ನೈರುತ್ಯ ರೈಲ್ವೆ ವಲಯದ ಹಿರಿಯ ಉಪಪ್ರಧಾನ ವ್ಯವಸ್ಥಾಪಕರಾದ ಎಸ್.ಕೆ.ಜೈನ್ರವರನ್ನು ಬೇಟಿ ಮಾಡಿದ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಹಿರಿಯ ಸದಸ್ಯರಾದ ಬಾಬುಲಾಲ್ ಜೈನ್ ಅವರ ನೇತೃತ್ವದಲ್ಲಿ ಬೇಡಿಕೆಯ ಮನವಿ ಪತ್ರ ಸಲ್ಲಿಸಿತು.
ಕಳೆದ ಹಲವು ವರ್ಷಗಳಿಂದ ಬೆಳಗಾವಿ, ಹೊಸಪೇಟೆ, ಹೈದ್ರಬಾದ್, ಮಣಗೂರು ನಡುವೆ ಸಂಚರಿಸುತ್ತಿರುವ ವಿಶೇಷ ರೈಲನ್ನು (ಗಾಡಿ ಸಂಖ್ಯೆ : 07335/36) ಇದೇ ತಿಂಗಳು 19 ರಿಂದ ರದ್ದುಗೊಳಿಸಲಾಗುದೆಂಬ ರೈಲ್ವೆ ಇಲಾಖೆಯ ಆದೇಶ ಖಂಡನೀಯವಾಗಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳಿಂದ ಪ್ರಸಿದ್ಧ ಯಾತ್ರಾಸ್ಥಳ ಮಂತ್ರಾಲಯಕ್ಕೆ ನೇರ ಸಂಪರ್ಕಗೊಳಿಸುವ ಏಕೈಕ ರೈಲು ಇದಾಗಿದ್ದು, ಸಂಚಾರ ರದ್ದುಗೊಳಿಸಿರುವುದರಿಂದ ಮಂತ್ರಾಲಯ ಮತ್ತು ಹೈದ್ರಬಾದ್ಗೆ ತೆರಳುವ ಪ್ರಯಾಣಿಕರಿಗೆ ವಿಫರೀತ ತೊಂದರೆ ಆಗುತ್ತದೆ. ಯಾವುದೇ ಸಕಾರಣಗಳಿಲ್ಲದೆ ಪ್ರಯಾಣಿಕರ ಸಂಚಾರ ದಟ್ಟನೆಯ ರೈಲನ್ನು ರದ್ದುಪಡಿಸಿರುವುದು ಸೂಕ್ತವಲ್ಲ. ತೆಲಂಗಾಣ ರಾಜ್ಯದಿಂದ ವಿಶ್ವಪಾರಂಪರಿಕ ತಾಣವಾದ ಹಂಪಿಗೆ ಈ ರೈಲು ನೇರ ಸಂಪರ್ಕ ಕಲ್ಪಿಸುತ್ತದೆ.
ಆದುದರಿಂದ ಮಂತ್ರಾಲಯ ಮತ್ತು ಹೈದ್ರಬಾದ್ಗೆ ತೆರಳುವ ಭಕ್ತಾದಿಗಳು ಮತ್ತು ಸಾರ್ವಜನಿಕರ ಹಿತದೃಷ್ಠಿಯಿಂದ ಈ ರೈಲಿನ ಸೇವೆಯನ್ನು ನಿರಂತರವಾಗಿ ಮುಂದುವರೆಸಿ ಈ ವಿಶೇಷ ರೈಲನ್ನು ಖಾಯಂಗೊಳಿಸಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನೈರುತ್ಯ ರೈಲ್ವೆ ವಿಭಾಗಿಯ ವ್ಯವಸ್ಥಾಪಕರಾದ ಸಂತೋಷ ಹೆಗಡೆ ಹಾಗೂ ಇತರೆ ಅಧಿಕಾರಿಗಳು, ಅಶೋಕ್ ಜೀರೆ, ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿಯ ಮುಖಂಡರಾದ ವೈ.ಯಮುನೇಶ್, ಜಿ.ಉಮಾಮಹೇಶ್ವರ್, ಯು.ಆಂಜನೇಯಲು, ಮುಂತಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 