ವೃತ್ತಿ ನಿರತರ ಕನ್ನಡ ಸಮ್ಮೇಳನ
ಕೊಪ್ಪಳ25: ನಿರಂತಕ ಇದೊಂದು ಕನ್ನಡ ಪರ ಕಾಳಜಿ ಇರುವ ಸಂಸ್ಥೆ ( ಎನ್ ಜಿ ಓ ) ಆಗಿದ್ದು, 2017 ರಲ್ಲಿ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಮಾನವ ಸಂಪನ್ಮೂಲ ವೃತ್ತಿ ನಿರತರ ಕನ್ನಡ ಸಮ್ಮೇಳನವನ್ನು ಯಶಸ್ವಿಯಾಗಿ ಸಂಯೋಜಿಸಿದ್ದರು.
ಈ ವರ್ಷವೂ ಸಹ ದ್ವಿತೀಯ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನವನ್ನು ಬೆಂಗಳೂರಿನ ಹೋಟಲ್ ಕ್ಯಾಪಿಟೋಲ್ನಲ್ಲಿ ಆಯೋಜಿಸಿದ್ದರು. ನಾಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಪೂರಕ ವಾತಾವರಣ ನಿಮರ್ಿಸುತ್ತಾ , ಸಂಸ್ಥೆಯಲ್ಲಿ ಕನ್ನಡ ಭಾಷೆಗೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಉದ್ಯಮಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗುವುದು.
ಈ ಸಮ್ಮೇಳನದ ಅಂಗವಾಗಿ ನಮ್ಮ ನಾಡು ನಮ್ಮ ಸಂಸ್ಥೆ -2018 ಗಾಗಿ ಅಜರ್ಿಗಳನ್ನು ಆಹ್ವಾನಿಸಿದ್ದರು, ನಮ್ಮ ಕಾಖರ್ಾನೆಯ ವತಿಯಿಂದ ಈ ಪ್ರಶಸ್ತಿಗಾಗಿ ಅಜರ್ಿ ಸಲ್ಲಿಸಿತ್ತು.
ಕಿಲರ್ೊಸ್ಕರ್ ಕಾಖರ್ಾನೆಯು ಸ್ಥಾಪಿತವಾದಾಗಿನಿಂದಲೂ ತನ್ನ ವ್ಯಾಪಾರ - ವಹಿವಾಟಿನ ಜೊತೆಯಲ್ಲಿಯೇ ಕನ್ನಡ ಭಾಷೆಯನ್ನು ತನ್ನ ದಿನನಿತ್ಯದ ವ್ಯವಹಾರದಲ್ಲಿ, ಆಡಳಿತ ವ್ಯವಸ್ಥೆಯಲ್ಲಿ ಅನುಷ್ಠಾನಗೊಳಿಸುತ್ತಾ ಬಂದಿದ್ದು ಹಾಗೆಯೇ ಕನ್ನಡ ಬೆಳವಣಿಗೆಗೆ ಪೂರಕ ವಾತಾವರಣವನ್ನು ಸೃಷ್ಠಿಸಿದುದರ ಹಿನ್ನೆಲೆಯಲ್ಲಿ ನಮ್ಮ ನಾಡು - ನಮ್ಮ ಸಂಸ್ಥೆ - 2018 ಪ್ರಶಸ್ತಿಗೆ ಭಾಜನವಾಗಿದೆ.
ನ.24ರಂದು ಬೆಂಗಳೂರಿನ ಹೋಟಲ್ ಕ್ಯಾಪಿಟೋಲ್ನಲ್ಲಿ ನೆಡೆದ ಸಮಾರಂಭದಲ್ಲಿ ಕಿಲರ್ೊಸ್ಕರ್ ಕಾಖರ್ಾನೆಯ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪಾಧ್ಯಕ್ಷರಾದ ಪಿ ನಾರಾಯಣ ಮತ್ತು ವ್ಯವಸ್ಥಾಪಕರಾದ ಶ್ರೀ ರವಿಕುಮಾರ್ ಯಾದವ್ ಇವರುಗಳು ಈ ಪ್ರಶಸ್ತಿಯನ್ನು ಸ್ವೀಕರಿಸಿರುತ್ತಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 