ಅಪರಾಧಿಗಳನ್ನು ದಂಡಿಸುವಾಗ ಜಾತಿ, ಧರ್ಮಗಳನ್ನು ಮಧ್ಯದಲ್ಲಿ ತರಬಾರದು: ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ
Caste and religion should not be brought into the middle while punishing criminals: DySP Siddalinga
ಅಪರಾಧಿಗಳನ್ನು ದಂಡಿಸುವಾಗ ಜಾತಿ, ಧರ್ಮಗಳನ್ನು ಮಧ್ಯದಲ್ಲಿ ತರಬಾರದು: ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ
ಗಂಗಾವತಿ 26: ಅಪರಾಧಿಗಳನ್ನು ದಂಡಿಸುವಾಗ ಜಾತಿ, ಧರ್ಮಗಳನ್ನು ಮಧ್ಯದಲ್ಲಿ ತರಬಾರದು ಎಂದು ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ ಹೇಳಿದರು.ನಗರ ಠಾಣೆ ಹಾಲ್ನಲ್ಲಿ ರಂಜಾನ್ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿ, ಸಾಮಾಜಿಕ ಸುವ್ಯವಸ್ಥೆ ಕದಲುವಂತಹ ಕೃತ್ಯ ಎಸಗಿದವರ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಣವಾಗಿ ಕ್ರಮ ಕೈಗೊಳ್ಳುತ್ತದೆ. ರಂಜಾನ್ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಎಲ್ಲ ಸಮುದಾಯದ ಜನರು ಸೌಹಾರ್ದಯುತವಾಗಿ ಹಬ್ಬ ಆಚರಿಸಬೇಕು,ಯಾವುದೇ ರೀತಿಯ ಗಲಾಟೆ, ಜನರಿಗೆ ತೊಂದರೆಯಾಗದ ರೀತಿಯಲ್ಲಿ ಸಮಾಜದ ಮುಖಂಡರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ನಗರಸಭೆ ಹಿರಿಯ ಸದಸ್ಯ ಶಾಮೀದ್ ಮನಿಯಾರ್ ಮಾತನಾಡಿ, ರಂಜಾನ್ ಹಬ್ಬದ ವೇಳೆ ನಾನಾ ಮಸೀದಿಗಳ ಪಕ್ಕದಲ್ಲಿ ಟ್ರಾಫಿಕ್, ವಾಹನಗಳ ಶಬ್ದ ನಿಯಂತ್ರಣ ಮಾಡಬೇಕು. ಹಬ್ಬದ ಪ್ರಯುಕ್ತ ಮಂದಿರದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿರುತ್ತದೆ. ಆ ವೇಳೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಮಸೀದಿ ಮುಂದೆ ಪಾರ್ಕಿಂಗ್ ಮಾಡಲಾಗಿರುವ ವಾಹನಗಳಿಂದ ಪೆಟ್ರೋಲ್ ಕಳ್ಳತನವಾಗುತ್ತಿದ್ದು, ಅದನ್ನು ತಡೆಗಟ್ಟಬೇಕು. ನಗರಸಭೆಯಿಂದ ಕುಡಿಯುವ ನೀರು ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪಿಐ ಪ್ರಕಾಶ ಮಾಳಿ ರಂಜಾನ್ ಹಬ್ಬದ ಪ್ರಯುಕ್ತ ಮಸೀದಿ ಮತ್ತು ನಾನಾ ವೃತ್ತಗಳಲ್ಲಿ ಹೆಚ್ಚುವರಿಯಾಗಿ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಯಾವುದೇ ರೀತಿಯ ಘರ್ಷಣೆಯಾಗದ ರೀತಿಯಲ್ಲಿ ಎಚ್ಚರ ವಹಿಸಲಾಗುವುದು ಅದಕ್ಕೆ ಸೂಕ್ತ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಎಸ್.ಬಿ.ಖಾದ್ರಿ, ಡಾ.ಬಸೀರಸಾಬ್,ದಳಪತಿ ಫಕೀರ್ಪ ನಾಯಕ್, ರಾಮನಾಯ್ಕ್,ನಗರ ಸಬೆ ಸಿಬ್ಬಂದಿ ಷಣ್ಮುಖ, ಮೀರಸಾಬ್, ನಜೀರ್ ಸಾಬ್, ಅಲಿಸಾಬ್, ಕಮರಸಾಬ್,ಸೇರಿದಂತೆ ಇತರರು ಇದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 