ಇಂದು ಜಾತಿ ಜಾಗೃತಿ ಸಭೆ: ಭಾಗವಹಿಸಲು ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ
Caste awareness meeting today: Basava Jayamrutyunjaya Swamiji calls to participate
ಇಂದು ಜಾತಿ ಜಾಗೃತಿ ಸಭೆ: ಭಾಗವಹಿಸಲು ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ
ರಾಯಬಾಗ, 16 ; ಹುಬ್ಬಳ್ಳಿಯ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಸೆ.17 ರಂದು ಸಾಯಂಕಾಲ 4 ಗಂಟೆಗೆ ಹಮ್ಮಿಕೊಂಡಿರುವ ಲಿಂಗಾಯತ ಪಂಚಮಸಾಲಿ ಜಾತಿ ಜಾಗೃತಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದರು.
ಮಂಗಳವಾರ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮನೆ ಮನೆಯ ಜಾತಿ ಗಣತಿ ಸಮೀಕ್ಷೆ ಕಾರ್ಯ ಕೈಗೊಳ್ಳುವುದರಿಂದ ಪ್ರತಿಯೊಬ್ಬ ಲಿಂಗಾಯತ ಪಂಚಮಸಾಲಿ ಸಮಾಜದವರು ಜಾತಿ ಕಾಲಂನಲ್ಲಿ ನಮೂದಿಸಬೇಕು. ಈ ಬಗ್ಗೆ ಜಾಗೃತಿ ಮೂಡಿಸುವ ನಮ್ಮ ಸಮಾಜದ ಸಚಿವರು, ಸಂಸದರು, ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ತಾಲೂಕಿನ ಹಾರೂಗೇರಿಯ ಚನ್ನವೃಷಭೇಂದ್ರ ಲೀಲಾಮಠದಲ್ಲಿ ಸೆ.20 ರಂದು ತಾಲೂಕು ಮಟ್ಟದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ರ್ಯಾಲಿ ಹಾಗೂ ವಿವಿಧ ಪಂಚಮಸಾಲಿ ಸಂಘಟನೆಗಳ ಸಹಯೋಗದೊಂದಿಗೆ ಶ್ರಾವಣ ಮಾಸದ ಪ್ರಯುಕ್ತ ತಾಲೂಕಿನ ಗ್ರಾಮಗಳಲ್ಲಿ ಜರುಗಿದ ಗ್ರಾಮ ಗ್ರಾಮದಲ್ಲಿ ಕೂಡಲಸಂಗಮ ಇಷ್ಟಲಿಂಗಪೂಜೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು, ಪಂಚಮಸಾಲಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದರು.
ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಶಿವಬಸು ಕಾಪಸೆ, ವಕೀಲರ ಸಂಘದ ಅಧ್ಯಕ್ಷ ಪಿ.ಎಮ್.ದರೂರ, ಸಂಗಣ್ಣ ದತ್ತವಾಡೆ, ಸುರೇಶ ಜಂಬಗಿ, ಬಸವರಾಜ ಕೋರೆ, ಸುರೇಶ ಹೊಸಪೇಟೆ, ಬಾಳಗೌಡ ಪಾಟೀಲ, ಆನಂದ ಹುದ್ದಾರ, ನಾರಾಯಣ ಮೇತ್ರಿ, ವಿನಾಯಕ ಪಾಟೀಲ, ವಿಶಾಲ ಕಿತ್ತೂರೆ, ಆನಂದ ಪಾಟೀಲ, ಸಾಗರ ಕುಲಾರೆ, ಆದರ್ಶ ಡಬ್ಬನವರ ಸೇರಿ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 