ಹೋಳಿ, ರಂಜಾನ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ : ಸಿಪಿಐ

ಹೋಳಿ, ರಂಜಾನ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ : ಸಿಪಿಐ  Celebrate Holi, Ranjana peacefully: CPI

ಯರಗಟ್ಟಿ 01 : ಹೋಳಿ ಹಾಗೂ ರಮಝಾನ್ ಹಬ್ಬದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು ಎಂದು ಸಿಪಿಐ ಆಯ್ ಎಂ ಮಠಪತಿ ಅವರು ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ರವಿವಾರ ಸಾಯಂಕಾಲ ಹಿಂದೂ ಮತ್ತು ಮುಸ್ಲಿಂ ಸಮಾಜದ ಮುಖಂಡರ ಸಭೆ ನಡೆಸಿ ಮಾತನಾಡಿದ ಅವರು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಹಾಗೆಯೇ ಮಾ.21 ರಂದು ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಬ್ಬಗಳ ಸಮಯದಲ್ಲಿ ಯಾವುದೇ ಆಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.ಪ್ರತಿಯೊಬ್ಬರು ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಯಾವುದೇ ಜಾತಿ, ಧರ್ಮದ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು.

ಹಬ್ಬ ಆಚರಣೆಯ ಕಾಲಕ್ಕೆ ಯಾವುದೇ ರೀತಿಯ ಆಹಿತಕರ ಘಟನೆ ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಉಭಯ ಸಮಾಜದ ಮುಖಂಡರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಿಎ??? ಎಲ್ ಬಿ ಮಾಳಿ, ಪಟ್ಟಣ ಪಂಚಾಯಿತಿ ಅಧಿಕಾರಿಯಾದ ಮಾರುತಿ ಕೋಳಿ, ವಿಠ್ಠಲಗೌಡ ದೇವರಡ್ಡಿ, ಈರಣ್ಣಾ ಮಠಪತಿ, ಸದಾನಂದ ಹಣಬರ, ವೆಂಕಟೇಶ ದೇವರಡ್ಡಿ, ಚೇತನ ಜಕಾತಿ, ಈರಣ್ಣಾ ಪೂಜೇರ, ರಾಮನಗೌಡ ಪಾಟೀಲ, ಭಾಸ್ಕರ ಹಿರೇಮೆತ್ರಿ, ಸಂತೋಷ ಚನ್ನಮೆತ್ರಿ, ಹನಮಂತ ಹಾರೂಗೊಪ್ಪ, ಯಲ್ಲಪ್ಪ ಪಟ್ಟಪನ್ನವರ, ಅರುಣ ನೀಲಪ್ಪನ್ನವರ, ಇಮಾಮಸಾಬ ಹುಸೇನಾಯ್ಕರ, ಸಲೀಂಬೇಗ ಜಮಾದಾರ, ರಫೀಕ ಡಿ.ಕೆ, ಇಮ್ತಿಯಾಜ್ ಖಾದ್ರಿ, ಮುನ್ನಾ ಶಾಬಾಶಖಾನ, ಹುಸೇನ ದಿಲಾವರನಾಯ್ಕ ಸೇರಿದಂತೆ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.