ಕೆಬಿಎಂಪಿಎಸ್ ಶಾಲೆಯಲ್ಲಿ ಸಂಭ್ರಮ ಶನಿವಾರ
Celebration Saturday at KBMPS School
ಇಂಡಿ 21: ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪದಲ್ಲಿರುವ ಸರಕಾರಿ ಕೆಬಿಎಂಪಿಎಸ್ ಶಾಲೆಯಲ್ಲಿ ಸಂಭ್ರಮ ಶನಿವಾರ ಕಾರ್ಯಕ್ರಮದ ಪ್ರಯುಕ್ತ ಅಗ್ನಿಶಾಮಕ ಸೇವೆಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಪ್ರಮುಖರಾದ ಡಿ.ಬಿ. ಪೂಜಾರಿ ಮಾತನಾಡಿ, ಆಕಸ್ಮಿಕ ಬೆಂಕಿ ತಗುಲಿದ ಸಂದರ್ಭದಲ್ಲಿ ತುರ್ತು ಕ್ರಮವಾಗಿ ಅಗ್ನಿಶಾಮಕ ದಳದವರಿಗೆ 101 ಅಥವಾ 112 ಸಂಖ್ಯೆಗೆ ಕರೆ ಮಾಡಬೇಕು. ಬೆಂಕಿ ನಂದಿಸುವುದಷ್ಟೇ ನಮ್ಮ ಕಾರ್ಯವಲ್ಲ ಬದಲಾಗಿ ಕಟ್ಟಡ ಕುಸಿತ, ಪ್ರವಾಹ ಮತ್ತು ಪ್ರಾಣಿಗಳನ್ನು ರಕ್ಷಿಸುವ ಕಾರ್ಯಾಚರಣೆಗಳನ್ನು ಸಹ ಅಗ್ನಿಶಾಮಕ ದಳದಿಂದ ಮಾಡಲಾಗುತ್ತದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಅಗ್ನಿ ದುರಂತದಲ್ಲಿ ಸುರಕ್ಷತಾ ಕ್ರಮಗಳ ಕುರಿತು ಹಾಗೂ ಅಗ್ನಿ ನಂದಿಸುವ ಕುರಿತು ಪ್ರದರ್ಶನದ ಮುಖಾಂತರ ಮಕ್ಕಳಿಗೆ ಮನವರಿಕೆ ಮಾಡಿ ಕೊಡಲಾಯಿತು. ಮಲ್ಲಿಕಾರ್ಜುನ ಗೋಟ್ಯಾಳ, ಉಮೇಶ ಹರಿಜನ, ಬಬಲು ಮಾಣಿಕ್ಭಾಯಿ ಸೇರಿದಂತೆ ಶಾಲಾ ಸಿಬ್ಬಂದಿಗಳಾದ ಎಸ್.ಬಿ. ವಡ್ಡರ, ಎ.ಬಿ. ದ್ಯಾಮಗೊಂಡ, ಎಸ್.ಎಸ್. ಬಿರಾದಾರ, ಸಿ.ಎಸ್. ಹಕಾರಿ, ಎಸ್. ಬಿ. ಕಲ್ಲೊಳ್ಳಿ ಸೇರಿದಂತೆ ಇನ್ನಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 