ಚಿಕ್ಕೋಡಿಯಲ್ಲಿ ಸಂತ ಸೇವಾಲಾಲ ಮಹಾರಾಜರ ಜಯಂತಿ ಆಚರಣೆ
Celebration of Saint Sewalal Maharaj's Jayanti in Chikkodi
ಚಿಕ್ಕೋಡಿಯಲ್ಲಿ ಸಂತ ಸೇವಾಲಾಲ ಮಹಾರಾಜರ ಜಯಂತಿ ಆಚರಣೆ
ಚಿಕ್ಕೋಡಿ 15 : ಬಂಜಾರ ಸಮಾಜದ ಜನರಲ್ಲಿ ಆತ್ಮಸ್ಥೈರ್ಯ ತುಂಬಿ ಸನ್ಮಾರ್ಗದ ಹಾದಿ ತೋರಿ ಸಮಾಜದ ಎಳ್ಗೆಗಾಗಿ ನಿರಂತರ ಶ್ರಮಿಸಿದ ಸಂತ ಸೇವಾಲಾಲ ದೇಶ ಕಂಡ ಶ್ರೇಷ್ಠ ಧಾರ್ಮಿಕ, ಆಧ್ಯಾತ್ಮಿಕ ಗುರುಗಳಲ್ಲಿ ಒಬ್ಬರಾಗಿದ್ದಾರೆ. ಆದರ್ಶ ತತ್ವಗಳನ್ನು ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ಎಲ್.ಪಿ.ಲಮಾಣಿ ಹೇಳಿದರು.
ಇಲ್ಲಿನ ಲೋಕೋಪಯೋಗಿ ಇಲಾಖೆ ಸಭಾ ಭವನದಲ್ಲಿ ಚಿಕ್ಕೋಡಿ ತಾಲೂಕಾ ಬಂಜಾರಾ ಫೌಂಡೇಶನ ವತಿಯಿಂದ ಹಮ್ಮಿಕೊಂಡ 286 ನೇ ಸಂತ ಸೇವಾಲಾಲ ಮಹಾರಾಜರ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು, ಇಡೀ ಜೀವನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾರು ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ ಜನತೆಗೆ ವ್ಯಸನ ಮುಕ್ತರಾಗಿ ಬೋಧಿಸಿದ ಸೇವಾಲಾಲರು ಸತ್ಯೆ ಅಹಿಂಸೆ ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದರು ಎಂದರು.
ಅಧ್ಯಕ್ಷತೆಯನ್ನು ಬಂಜಾರ ಸಮಾಜ ಫೌಂಡೇಶನ ಅಧ್ಯಕ್ಷ ಬಿ.ಎಂ.ನಾಯಿಕ ವಹಿಸಿದ್ದರು.ಈ ಸಂದರ್ಭದಲ್ಲಿ ಪುಂಡಲಿಕ ಲಮಾಣಿ ಶಿವು ರಾಠೋಡ ರಾಜು ಲಮಾಣಿ, ಅಶೋಕ ರಾಠೋಡ, ಪುಂಡಲಿಕ ನಾಯಿಕ ಶಿವು ಲಮಾಣಿ ಶ್ರೀನಿವಾಸ ನಾಯಿಕ ಪ್ರಕಾಶ ರಾಠೋಡ ಮುಂತಾದವರು ಇದ್ದರು.ಉಪನ್ಯಾಸಕ ಎಂ.ಜಿ.ನಾಯಿಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 