ಚಿಕ್ಕೋಡಿಯಲ್ಲಿ ಸಂತ ಸೇವಾಲಾಲ ಮಹಾರಾಜರ ಜಯಂತಿ ಆಚರಣೆ
Celebration of Saint Sewalal Maharaj's Jayanti in Chikkodi
ಚಿಕ್ಕೋಡಿಯಲ್ಲಿ ಸಂತ ಸೇವಾಲಾಲ ಮಹಾರಾಜರ ಜಯಂತಿ ಆಚರಣೆ
ಚಿಕ್ಕೋಡಿ 15 : ಬಂಜಾರ ಸಮಾಜದ ಜನರಲ್ಲಿ ಆತ್ಮಸ್ಥೈರ್ಯ ತುಂಬಿ ಸನ್ಮಾರ್ಗದ ಹಾದಿ ತೋರಿ ಸಮಾಜದ ಎಳ್ಗೆಗಾಗಿ ನಿರಂತರ ಶ್ರಮಿಸಿದ ಸಂತ ಸೇವಾಲಾಲ ದೇಶ ಕಂಡ ಶ್ರೇಷ್ಠ ಧಾರ್ಮಿಕ, ಆಧ್ಯಾತ್ಮಿಕ ಗುರುಗಳಲ್ಲಿ ಒಬ್ಬರಾಗಿದ್ದಾರೆ. ಆದರ್ಶ ತತ್ವಗಳನ್ನು ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಚಾರ್ಯ ಎಲ್.ಪಿ.ಲಮಾಣಿ ಹೇಳಿದರು.
ಇಲ್ಲಿನ ಲೋಕೋಪಯೋಗಿ ಇಲಾಖೆ ಸಭಾ ಭವನದಲ್ಲಿ ಚಿಕ್ಕೋಡಿ ತಾಲೂಕಾ ಬಂಜಾರಾ ಫೌಂಡೇಶನ ವತಿಯಿಂದ ಹಮ್ಮಿಕೊಂಡ 286 ನೇ ಸಂತ ಸೇವಾಲಾಲ ಮಹಾರಾಜರ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಂತ ಸೇವಾಲಾಲ್ ಮಹಾರಾಜರು ಹಲವು ಪವಾಡಗಳ ಮೂಲಕ ಜನರ ಮನ ಗೆದ್ದವರು, ಇಡೀ ಜೀವನದುದ್ದಕ್ಕೂ ಬ್ರಹ್ಮಚರ್ಯವನ್ನೇ ಪಾಲನೆ ಮಾಡಿದ ಸಂತ ಸೇವಾಲಾರು ಇಂದಿಗೂ ಜನ ಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ ಜನತೆಗೆ ವ್ಯಸನ ಮುಕ್ತರಾಗಿ ಬೋಧಿಸಿದ ಸೇವಾಲಾಲರು ಸತ್ಯೆ ಅಹಿಂಸೆ ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದರು ಎಂದರು.
ಅಧ್ಯಕ್ಷತೆಯನ್ನು ಬಂಜಾರ ಸಮಾಜ ಫೌಂಡೇಶನ ಅಧ್ಯಕ್ಷ ಬಿ.ಎಂ.ನಾಯಿಕ ವಹಿಸಿದ್ದರು.ಈ ಸಂದರ್ಭದಲ್ಲಿ ಪುಂಡಲಿಕ ಲಮಾಣಿ ಶಿವು ರಾಠೋಡ ರಾಜು ಲಮಾಣಿ, ಅಶೋಕ ರಾಠೋಡ, ಪುಂಡಲಿಕ ನಾಯಿಕ ಶಿವು ಲಮಾಣಿ ಶ್ರೀನಿವಾಸ ನಾಯಿಕ ಪ್ರಕಾಶ ರಾಠೋಡ ಮುಂತಾದವರು ಇದ್ದರು.ಉಪನ್ಯಾಸಕ ಎಂ.ಜಿ.ನಾಯಿಕ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 