ಶಿವಾಜಿ ಮಹಾರಾಜರ ಜಯಂತಿ ಆಚರಣೆ
Celebration of Shivaji Maharaja's Jayanti
ಶಿವಾಜಿ ಮಹಾರಾಜರ ಜಯಂತಿ ಆಚರಣೆ
ಗುರ್ಲಾಪೂರ 19: ಗ್ರಾಮದ ಸರಾರಿ ಶಾಸಕರ ಮಾದರಿ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಶಾಲೆಯ ಪದವೀಧರ ಮುಖ್ಯೋಪಾಧ್ಯಯ ಜಿ ಆರ್ ಪತ್ತಾರ ಇವರ ಅಧ್ಯಕ್ಷತೆಯಲ್ಲಿ ಛತ್ರಪತಿ ಶಿವಾಜಿಯವರ ಬಾವಚಿತ್ರಕ್ಕೆ ಪೂಜೆಸಲ್ಲಿಸಿ ಪುಷ್ಪಾರ್ಚಣೆ ಮಾಡಲಾಯಿತು. ನಂತರ ಶಿವಾಜಿ ಮಹಾರಾಜರು ದೇಶಕ್ಕೆ ನೀಡಿದ ಸಾಧನೆಗಳೂ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಯ ಬಗ್ಗೆ ಮಕ್ಕಳಿಗೆ ತಿಳಿಸಿದರು. ಮಕ್ಕಳಾದ ಐಶ್ವರ್ಯ ಸುಳ್ಳನವರ ಹಾಗೂ ಸತ್ತಿಗೇರಿ ಯವರು ಶಿವಾಜಿಯ ಬಾಲ್ಯ ಜೀವನ ಹಾಗೂ ತಾಯಿ ಜೀಜಾಮಾತೆ ಶಿವಾಜಿಗೆ ನೀಡಿದ ಶಿಕ್ಷಣದ ಬಗ್ಗೆ ಮಾತನಾಡಿದರು. ಶಿವಾಜಿ ಜಯಂತಿಯಲ್ಲಿ ಬಿ ಬಿ ಸಸಾಲಟ್ಟಿ, ಬಿ ವಾಯ ಮೋಮಿನ್, ಎಲ್ ಆರ್ ಸಾಲಿಮಠ, ಎಸ್ ಬಿ ದರೂರ, ಎ ಡಿ ಪಡಗಾನೂರ, ಜ್ಯೋತಿ ಕಾಳಪ್ಪಗೋಳ ಹಾಗೂ ಮಕ್ಕಳು ಪಾಲ್ಗೊಂಡಿದ್ದರು. ವಿದ್ಯಾಶ್ರೀ ನೇಮಗೌಡರ ಸ್ವಾಗತಿಸಿ, ನಿರೂಪಿಸಿದರು. ಕವಿತಾ ಕಟಗಿ ವಂದಿಸಿದರು.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ 