ಶಿವಾಜಿ ಮಹಾರಾಜರ ಜಯಂತಿ ಆಚರಣೆ
Celebration of Shivaji Maharaja's Jayanti
ಶಿವಾಜಿ ಮಹಾರಾಜರ ಜಯಂತಿ ಆಚರಣೆ
ಗುರ್ಲಾಪೂರ 19: ಗ್ರಾಮದ ಸರಾರಿ ಶಾಸಕರ ಮಾದರಿ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಶಾಲೆಯ ಪದವೀಧರ ಮುಖ್ಯೋಪಾಧ್ಯಯ ಜಿ ಆರ್ ಪತ್ತಾರ ಇವರ ಅಧ್ಯಕ್ಷತೆಯಲ್ಲಿ ಛತ್ರಪತಿ ಶಿವಾಜಿಯವರ ಬಾವಚಿತ್ರಕ್ಕೆ ಪೂಜೆಸಲ್ಲಿಸಿ ಪುಷ್ಪಾರ್ಚಣೆ ಮಾಡಲಾಯಿತು. ನಂತರ ಶಿವಾಜಿ ಮಹಾರಾಜರು ದೇಶಕ್ಕೆ ನೀಡಿದ ಸಾಧನೆಗಳೂ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಯ ಬಗ್ಗೆ ಮಕ್ಕಳಿಗೆ ತಿಳಿಸಿದರು. ಮಕ್ಕಳಾದ ಐಶ್ವರ್ಯ ಸುಳ್ಳನವರ ಹಾಗೂ ಸತ್ತಿಗೇರಿ ಯವರು ಶಿವಾಜಿಯ ಬಾಲ್ಯ ಜೀವನ ಹಾಗೂ ತಾಯಿ ಜೀಜಾಮಾತೆ ಶಿವಾಜಿಗೆ ನೀಡಿದ ಶಿಕ್ಷಣದ ಬಗ್ಗೆ ಮಾತನಾಡಿದರು. ಶಿವಾಜಿ ಜಯಂತಿಯಲ್ಲಿ ಬಿ ಬಿ ಸಸಾಲಟ್ಟಿ, ಬಿ ವಾಯ ಮೋಮಿನ್, ಎಲ್ ಆರ್ ಸಾಲಿಮಠ, ಎಸ್ ಬಿ ದರೂರ, ಎ ಡಿ ಪಡಗಾನೂರ, ಜ್ಯೋತಿ ಕಾಳಪ್ಪಗೋಳ ಹಾಗೂ ಮಕ್ಕಳು ಪಾಲ್ಗೊಂಡಿದ್ದರು. ವಿದ್ಯಾಶ್ರೀ ನೇಮಗೌಡರ ಸ್ವಾಗತಿಸಿ, ನಿರೂಪಿಸಿದರು. ಕವಿತಾ ಕಟಗಿ ವಂದಿಸಿದರು.
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ 