ಗ್ರಾಮ ಪಂ ಸದಸ್ಯರಿಗೆ ಬಿಳ್ಕೊಡುವ ಸಮಾರಂಭ
Ceremony to give the village council members a white coat
ಯಮಕನಮರಡಿ, 31 : ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರ ಸರಕಾರದ ಆದೇಶದ ಮೇರೆಗೆ ಸದಸ್ಯತ್ವ ಮುಕ್ತಾಯಗೊಂಡಿದ್ದು ಸದರಿಯವರನ್ನು ಗ್ರಾಮ ಪಂಚಾಯಿತಿ ಪರವಾಗಿ ದಿನಾಂಕ 31ರಂದು ಬಿಳ್ಕೊಡುವ ಸಮಾರಂಭವು ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜನ ನಿರ್ಮಲ ಯೋಜನೆಯ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸತೀಶ್ ಜಾರಕಿಹೊಳಿಯವರ ಆಪ್ತ ಸಹಾಯಕರು ಆದ ಕಿರಣ್ ಸಿಂಗ್ ರಜಪೂತ್ ಅವರು ಆಗಮಿಸಿ ಮಾತನಾಡುತ್ತಾ ಐದು ವರ್ಷದ ಅವಧಿಯಲ್ಲಿ ಎಲ್ಲಾ ಸದಸ್ಯರ ಬೆಂಬಲದಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ ಅಲ್ಲದೆ ಶಾಲಾ ಕಟ್ಟಡಗಳು ಗ್ರಂಥಾಲಯ ಇತ್ಯಾದಿ ಗ್ರಾಮದ ಪ್ರಮುಖ ಗಲ್ಲಿಗಳಲ್ಲಿ ಕಾಮಗಾರಿ ಮಾಡಲಾಗಿದೆ ಉಳಿದ ಕಾಮಗಾರಿಗಳನ್ನು ಮಾಡುವ ಕೆಲಸ ಪ್ರಾರಂಭವಿದ್ದು ನಿಮ್ಮೆಲ್ಲರ ಬೆಂಬಲದಿಂದ ಕರ್ನಾಟಕ ಸರ್ಕಾರದಿಂದ ಗಾಂಧಿ ಪುರಸ್ಕಾರ ದೊರಕಿದ್ದು ತಮಗೂ ನಮಗೂ ಗ್ರಾಮದ ಮತದಾರರಿಗೂ ಹೆಮ್ಮೆಪಡುವ ಸಂಗತಿಯಾಗಿದೆ ಅಲ್ಲದೆ ಸತೀಶ್ ಜಾರಕಿಹೊಳಿ ಅವರ ಮಾರಕ ದರ್ಶನದಲ್ಲಿ ನಾವೆಲ್ಲರೂ ನಡೆದುಕೊಂಡು ಬಂದಿರುವುದೊಂದು ಹೆಮ್ಮೆಯ ಸಂಗತಿ ಆಗಿದೆ ಎಂದು ಹೇಳಿದರು.
ಗ್ರಾಮ ಪಂ ಅಭಿವೃದ್ಧಿ ಅಧಿಕಾರಿಗಳು ಸದಸ್ಯರನ್ನು ಉದ್ದೇಶಿಸಿ ಮಾತನಾಡುತ್ತಾ ತಮ್ಮ ಸಹಕಾರ ನಮಗೆ ಕೆಲಸಗಳನ್ನು ಮಾಡಲು ಬಹಳಷ್ಟು ಅನುಕೂಲತೆ ದೊರೆತಂತಾಗಿದೆ ಗ್ರಾಮದಲ್ಲಿ ಸ್ವಚ್ಛತೆ ಕ್ರಮಗಳನ್ನು ಕೈಕೊಳ್ಳಲಾಗಿದೆ ಇನ್ನು ಕೆಲವರು ಶೌಚಾಲಯಗಳನ್ನು ನಿರ್ಮಿಸಿ ಸಂಪೂರ್ಣ ಸ್ವಚ್ಛ ಗ್ರಾಮ ವನ್ನಾಗಿ ಮಾಡುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಜೊತೆಗೆ ಗ್ರಾಮದ ಜನರಲ್ಲಿ ಕುಡಿಯುವ ನೀರನ್ನು ಸಮರ್ಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲ ಸದಸ್ಯರಿಗೆ ಪದಾಧಿಕಾರಿಗಳಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು ಪ್ರಾರಂಭದಲ್ಲಿ ಶಾಂತಕುಮಾರ್ ಮೊಲಾಜಿ ಸಂತೋಷ್ ರಾವಳ ಅವರು ಸದಸ್ಯ ರನ್ನು ಸ್ವಾಗತಿಸಿದರು ಅದರಂತೆ ಎಲ್ಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 