ಚರಾಟಿರವರ ಸದಾನಂದ ಓಂಕಾರ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಲೋಕಾರೆ್ಣ
Charativara Sadananda Omkara Multi Specialty Hospital Lokaran
ಚರಾಟಿರವರ ಸದಾನಂದ ಓಂಕಾರ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಲೋಕಾರೆ್ಣ
ಚಿಕ್ಕೋಡಿ 22: ಆಸ್ಪತ್ರೆಗೆ ಬರುವ ರೋಗಿಗಳನ್ನು ಆತ್ಮೀಯತೆಯಿಂದ ಕಂಡುಕೊಂಡು ಉತ್ತಮ ಚಿಕಿತ್ಸೆ ನೀಡಿದರೆ ರೋಗಿಗಳು ಶೀಘ್ರ ಗುಣಮುಖರಾಗುತ್ತಾರೆ ಮತ್ತು ಆಸ್ಪತ್ರೆಗಳು ಬೆಳವಣಿಗೆ ಸಾಧಿಸುತ್ತವೆ. ಡಾ,ಅಜೀತ ಚರಾಟಿ ಅವರು ಜನಸ್ನೇಹಿಯಾಗಿ ವೈದ್ಯಕೀಯ ಸೇವೆ ಕೊಡಬೇಕು ಎಂದು ಕೆಎಲ್ಇ ಕಾರಾ್ಯಧ್ಯಕ್ಷ ಡಾ, ಪ್ರಭಾಕರ ಕೋರೆ ಹೇಳಿದರು.
ಇಲ್ಲಿನ ವೀರಸಾವರ್ಕರ ನಗರದಲ್ಲಿ ಚರಾಟಿರವರ ಸದಾನಂದ ಓಂಕಾರ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲುಬು-ಕೀಲು ವೈದ್ಯರಾಗಿ ಹಲವು ವರ್ಷಗಳಿಂದ ಸೇವೆ ನೀಡುತ್ತಿರುವ ಡಾ, ಅಜೀತ ಚರಾಟಿ ಅವರು ನೂತನ ಕಟ್ಟಡದ ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಸೇವೆ ನೀಡಬೇಕು ಎಂದರು.
ದಿವ್ಯ ಸಾನಿಧ್ಯವನ್ನು ನಿಡಸೋಸಿ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಚರಮೂರ್ತಿಮಠದ ಸಂಪಾದನ ಸ್ವಾಮೀಜಿ, ಮಾಜಿ ಸಂಸದ ರಮೇಶ ಕತ್ತಿ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ದುರೀಣ ಜಗದೀಶ ಕವಟಗಿಮಠ, ಪುರಸಭೆ ಅಧ್ಯಕ್ಷೆ ಶ್ರೀಮತಿ ವೀಣಾ ಕವಟಗಿಮಠ ಅವರು ಆಸ್ಪತ್ರೆಯ ವಿವಿಧ ಘಟಕಗಳನ್ನು ಉದ್ಘಾಟಿಸಿದರು.
ಅನುಸುಯಾ ಚರಾಟಿ, ಡಾ, ಅಜಿತ ಚರಾಟಿ, ಡಾ, ಕಾವೇರಿ ಚರಾಟಿ, ಜಿಪಂ ಮಾಜಿ ಸದಸ್ಯ ಮಹೇಶ ಭಾತೆ, ಮಲ್ಲಿಕಾರ್ಜುನ ಕೋರೆ, ಸುರೇಶ ಬೆಲ್ಲದ, ಡಾ, ಎಂ.ಬಿ.ಕುಂಬಾರ, ಬಸವರಾಜ ಕುಂಬಾರ, ಶಿವಾನಂದ ಮರಾ್ಯಯಿ, ರಾಜು ಕುಂಬಾರ, ಕುಮಾರ ಮದನ್ನವರ, ಮಂಜುನಾಥ ರೊಟ್ಟಿ, ಅಜಯ ಕವಟಗಿಮಠ, ಪುರಸಭೆ ಸದಸ್ಯ ಗುಲಾಬ ಬಾಗವಾನ, ಪಿ.ಐ.ಕೋರೆ, ಡಾ, ಶಿವು ಪಾಟೀಲ, ಡಾ, ಲಕ್ಷ್ಮೀಕಾಂತ ಕಡ್ಲೇಪ್ಪಗೋಳ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 