ರೈತ ಸಂಘದ ತಾಲೂಕು ಅಧ್ಯಕ್ಷೆ ಚೆನ್ನಮ್ಮ ಮೇತ್ರಿ ಆಯ್ಕೆ
Chennamma Methri elected as Taluk President of Farmers' Association
ರೈತ ಸಂಘದ ತಾಲೂಕು ಅಧ್ಯಕ್ಷೆ ಚೆನ್ನಮ್ಮ ಮೇತ್ರಿ ಆಯ್ಕೆ
ದೇವರಹಿಪ್ಪರಗಿ 10:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಮಹಿಳಾ ಘಟಕದ ನೂತನ ಅಧ್ಯಕ್ಷೆ ಚೆನ್ನಮ್ಮ ಮೇತ್ರಿ ಅವರನ್ನು ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಹಾಗೂ ತಾಲ್ಲೂಕು ಅಧ್ಯಕ್ಷರಾದ ಈರ್ಪ ಕುಳೇಕುಮಟಗಿ ಆಯ್ಕೆ ಮಾಡಿ ಆದೇಶ ಪತ್ರ ನೀಡಿದ್ದಾರೆ.ಪಟ್ಟಣದ ರೈತ ಭವನದಲ್ಲಿ ರವಿವಾರದಂದು ರೈತ ಮುಖಂಡರು ಸನ್ಮಾನಿಸಿ ಗೌರವಿಸಿದರು ನಂತರ ತಾಲ್ಲೂಕು ಅಧ್ಯಕ್ಷ ಈರ್ಪ ಕುಳೇಕುಮಟಗಿ ಮಾತನಾಡಿದ ಅವರು, ರೈತರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಅವರ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲಬೇಕು.ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ಸೈದಾಂತಿಕ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ರೈತರ ಬೆನ್ನೆಲುಬಾಗಿ ನಿಂತು ಪರಿಹಾರ ಒದಗಿಸುವ ಸಂವಿಧಾನದ ಬದ್ದ ನೀತಿ ನಿಯಮಗಳನ್ನು ತೋರದೆ ಶಿಸ್ತಿನಿಂದ ಮತ್ತು ನಿಷ್ಠೆಯಿಂದ ನಿರ್ವಹಿಸಬೇಕು ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಶಿವಾನಂದ ಹಿರೇಮಠ, ಜಿಲ್ಲಾ ಉಪಾಧ್ಯಕ್ಷರಾದ ಸಂಪತ್ ಜಮಾದಾರ, ಮಹಿಳಾ ಮುಖಂಡೆ ಸುನಂದಾ ಸೋನ್ನಹಳ್ಳಿ ಸೇರಿದಂತೆ ಹಲವಾರು ಜನ ರೈತ ಸಂಘದ ಪದಾಧಿಕಾರಿಗಳ, ಮಹಿಳಾ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 