ಕಾನಿಪ ಸಂಘದ ಜಿಲ್ಲಾ ಕಾರ್ಯಕಾರಣಿಯಾಗಿ ಚಿದಂಬರ ಕುಲಕರ್ಣಿ ಆಯ್ಕೆ

ಕಾನಿಪ ಸಂಘದ ಜಿಲ್ಲಾ ಕಾರ್ಯಕಾರಣಿಯಾಗಿ ಚಿದಂಬರ ಕುಲಕರ್ಣಿ ಆಯ್ಕೆ Chidambaram Kulkarni elected as district executive of Kanip Sangha

ವಿಜಯಪುರ 10: ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಕಾರ್ಯಕಾರಣಿ ಸಮಿತಿ ಸ್ಥಾನಕ್ಕೆ ಪತ್ರಕರ್ತ ಚಿದಂಬರ ಕುಲಕರ್ಣಿ ಆಯ್ಕೆಯಾಗಿದ್ದಾರೆ. 2025-28ನೇ ಸಾಲಿನ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಕಾರ್ಯಕಾರಣಿ ಸಮಿತಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಚಿದಂಬರ ಕುಲಕರ್ಣಿ ಅವರಿಗೆ ಚುನಾವಣಾಧಿಕಾರಿ ಹಾಗೂ ಹಿರಿಯ ಪತ್ರಕರ್ತರಾದ ಟಿ.ಕೆ. ಮಲಗೊಂಡ ಅವರು ಪ್ರಮಾಣ ಪತ್ರ ವಿತರಿಸಿದರು.  ಚಿದಂಬರ ಕುಲಕರ್ಣಿ ಅವರ ಕುಟುಂಬ ವರ್ಗದವರು, ಸ್ನೇಹಿತರು ಅವಿನಾಶ ಬಿದರಿ ಅವರಿಗೆ ಅಭಿನಂದಿಸಿದ್ದಾರೆ.