ಅಥಣಿ ರಸ್ತೆ ಕಾಮಗಾರಿಗೆ ಚಿದಾನಂದ ಸವದಿ ಭೂಮಿ ಪೂಜೆ
Chidananda Savadi Bhoomi Puja for Athani Road work
ಅಥಣಿ 25: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಅಥಣಿ ಪುರಸಭೆಯ ಮೂಲಕ ಅಥಣಿ ಪಟ್ಟಣದಲ್ಲಿ ಜನಪರ ಮತ್ತು ಅಭಿವೃದ್ಧಿ ಪರ ಕಾರ್ಯಗಳು ಅನುಷ್ಠಾನಗೊಳ್ಳುತ್ತಿವೆ ಎಂದು ಕಾಂಗ್ರೆಸ್ ಯುವ ನಾಯಕ ಚಿದಾನಂದ ಸವದಿ ಹೇಳಿದರು. ಅವರು ಪುರಸಭಾ ಯೋಜನೆಯಡಿ ಮಂಜೂರಾದ ಬಸವೇಶ್ವರ ವೃತ್ತದಿಂದ ಹನುಮಾನ ಅಗಸಿ ವರೆಗಿನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಇತ್ತೀಚೆಗಷ್ಟೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಅಥಣಿ ಪುರಸಭೆಯನ್ನು ನಗರ ಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಅಥಣಿಗೆ ಹರಿದು ಬರಲಿದೆ ಎಂದು ಹೇಳಿದ ಅವರು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಕೆರೆ ಅಭಿವೃದ್ಧಿ ಮತ್ತು ಭಾಗೀರಥಿ ನಾಲಾ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ ಎಂದರು.
ಪುರಸಭಾ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಗುತ್ತಿಗೆದಾರ ಮಯೂರ ಸಿಂಗೆ, ಸದಸ್ಯರಾದ ಮಲ್ಲೇಶ ಹುದ್ದಾರ, ಸಂತೋಷ ಸಾವಡಕರ, ಮಲ್ಲಿಕಾರ್ಜುನ ಬುಟಾಳಿ, ವೀಲೀನರಾಜ ಯಳಮೇಲಿ, ರಾಜಶೇಖರ ಗುಡೋಡಗಿ, ರವಿ ಭಡಕಂಬಿ, ರಮೇಶ ಪವಾರ, ನರಸು ಬಡಕಂಬಿ, ಶಶಿಕಾಂತ ಹುಲಕುಂದ, ಬಸವರಾಜ ನಾಯಿಕ, ಸೈಯ್ಯದಮೀನ್ ಗದ್ಯಾಳ, ರಾಜು ಬುಲುಬುಲೆ, ಬಾಬು ಖೆಮಲಾಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 