ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಸಾಹಿತ್ಯದ ಸಂಸ್ಕಾರ ನೀಡುವುದವಶ್ಯ: ಮಣ್ಣೂರ
Children need to be given literary education at the primary level: Mannur
ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಸಾಹಿತ್ಯದ ಸಂಸ್ಕಾರ ನೀಡುವುದವಶ್ಯ: ಮಣ್ಣೂರ
ವಿಜಯಪುರ 02: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಸಾಹಿತ್ಯದ ಸಂಸ್ಕಾರ ನೀಡುವುದು ಅವಶ್ಯವಾಗಿದೆ. ಕವಿಗಳ ಕಾವ್ಯ ಕಥೆ ವಿವಿಧ ಸಾಹಿತ್ಯದ ಪ್ರಕಾರಗಳನ್ನು ಮಕ್ಕಳಿಂದಲೇ ಓದಿಸಿ ಚಿತ್ರ ತೆಗೆಸುವುದರ ಮೂಲಕ ಮಕ್ಕಳ ಮೇಲೆ ಕವಿಗಳ ಪ್ರಭಾವ ಬೀರಿ ಭವಿಷ್ಯದಲ್ಲಿ ಖ್ಯಾತ ಕವಿ ಸಾಹಿತಿಗಳಾಗ ಬಲ್ಲರು ವರಕವಿ ಬೇಂದ್ರೆ ಅವರ ಶ್ರಾವಣ ಬಂತು ಕಾಡಿಗೆ ಬಂತು ನಾಡಿಗೆ ಬಂತು ಬೀಡಿಗೆ ಬಂತು ಶ್ರಾವಣ ಮಾಸವನ್ನು ಸಂಭ್ರಮಿಸುವ ಹಾಡು ಸುಂದರವಾಗಿ ಮೂಡಿಬಂದಿದೆ ಎಂದು ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ ಎಚ್ ಮಣ್ಣೂರ ನುಡಿದರು.
ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಶ್ರಾವಣ ಕಾವ್ಯ ಸಂಭ್ರಮ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಮಕ್ಕಳೆ ರಚಿಸಿದ ಭಾವಚಿತ್ರವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಖ್ಯಾತ ಕವಿಗಳ ಕವನ ವಾಚನ ಮಾಡಿದರು. ಮಕ್ಕಳಿಗೆ ನಿರಂತರವಾಗಿ ಸೃಜನಶೀಲ ಹಾಗೂ ರಚನಾತ್ಮಕ ಚಟುವಟಿಕೆ ಮಾಡಿಸುತ್ತಿರುವುದು ಶ್ಲಾಘನೀಯವಾದದ್ದು ಎಂದು ನುಡಿದರು. ವೇದಿಕೆಯ ಮೇಲೆ ಮುಖ್ಯೋಪಾಧ್ಯಾಯ ರಮೇಶ ಕೊಟ್ಯಾಳ ಶಾಲಾ ಪ್ರತಿನಿಧಿ ಕಾರ್ಯದರ್ಶಿ ಸಮರ್ಥ ಮಿರ್ಜಿ ವೈಷ್ಣವಿ ಹತ್ತಳ್ಳಿ ಬೋಧಕ ಬೋಧಕೇತರ ಸಿಬ್ಬಂದಿ ಪಾಲಕರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 