ಫೆ.27 ಅಮ್ಮಿನಬಾವಿಯಲ್ಲಿ ಚಿಣ್ಣರ ಸಾಂಸ್ಕೃತಿಕ ಹಬ್ಬ
Chinna cultural festival at Amminabavi on Feb. 27
ಧಾರವಾಡ 24 : ಹತ್ತಿರದ ಅಮ್ಮಿನಬಾವಿ ಗ್ರಾಮದ ಸುಶಿಲಾತಾಯಿ ಅಜ್ಜಯ್ಯ ಹಿರೇಮಠ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಫೆ.27 ರಂದು(ಶುಕ್ರವಾರ) ಸಂಜೆ 4 ಗಂಟೆಗೆ ಚಿಣ್ಣರ ಸಾಂಸ್ಕೃತಿಕ ಹಬ್ಬ ಜರುಗಲಿದೆ.ಬಾಳೆಹೊನ್ನೂರಿನ ಶ್ರೀಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನ ಹಾಗೂ ಅಮ್ಮಿನಬಾವಿಯ ಶ್ರೀಗುರುಶಾಂತಲಿ0ಗ ಶಿವಾಚಾರ್ಯ ಶಿಕ್ಷಣ ಪ್ರತಿಷ್ಠಾನಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಈ ಹಬ್ಬವನ್ನು ಅಮ್ಮಿನಬಾವಿ ಪಂಚಗೃಹ ಹಿರೇಮಠದ ಅಭಿನವ ಶಾಂತಲಿ0ಗ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸುವರು. ಅಮ್ಮಿನಬಾವಿ ಪಂಚಗೃಹ ಹಿರೇಮಠದ ಹಿರಿಯ ಶ್ರೀಗಳಾದ ಶಾಂತಲಿ0ಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯವಹಿಸಲಿದ್ದು, ಶಾಲಾ ಆಡಳಿತ ಮಂಡಳಿಯ ಸದಸ್ಯರುಗಳಾದ ಎಂ.ಸಿ.ಹುಲ್ಲೂರ, ವ್ಹಿ. ಬಿ. ಕೆಂಚನಗೌಡರ, ಶಿವಾನಂದ ಹಿರೇಮಠ, ಬಸವರಾಜ ಕೊಳ್ಳಿ, ಅಮೃತ ಗುಡಿ, ಗುರುಮೂರ್ತಿ ಯರಗಂಬಳಿಮಠ, ಚಂದ್ರು ಶೆಟ್ಟರ, ವಿಜಯಕುಮಾರ ಇಟಗಿ, ಸೋಮಲಿಂಗಶಾಸಿೊ ಗುಡ್ಡದಮಠ ಅತಿಥಿಗಳಾಗಿ ಪಾಲ್ಗೊಳ್ಳುವರು.ಈ ಸಾಂಸ್ಕೃತಿಕ ಹಬ್ಬದಲ್ಲಿ ಶಾಲಾ ಮಕ್ಕಳು ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಅಭಿವ್ಯಕ್ತಿಸಲಿದ್ದು, ಸಾರ್ವಜನಿಕರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮುಖ್ಯಾಧ್ಯಾಪಕಿ ಮಂಜುಳಾ ದೊಡಮನಿ ಹಾಗೂ ಹಬ್ಬದ ಸಂಚಾಲಕ ಟಿ.ಎಂ. ದೇಸಾಯಿ ಜಂಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 