ಚೌಡಯ್ಯನವರ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ
Choudaiya's various religious worship programs
ಚೌಡಯ್ಯನವರ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು
ರಾಣಿಬೆನ್ನೂರ 15: ತಾಲೂಕಿನ ಚೌಡಯ್ಯದಾನಪುರ ಗ್ರಾಮದ ತುಂಗಭದ್ರ ನದಿ ತಟದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯಮಂಟಪಕ್ಕೆ ಕುಂಬಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಒಡೆಯರ ಚಿತ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಂಗಳವಾರ ಭಕ್ತಿ ಭಾವದಿಂದ ನಡೆದವು.
ಗ್ರಾಮದ ಶ್ರೀಗಳ ಮಠದಿಂದ ಬೆಳಿಗ್ಗೆ 10ಗಂಟೆಗೆ ನಿಜಶರಣ ಅಂಬಿಗರ ಚೌಡಯ್ಯನವರ ಹಾಗೂ ವಿರುಪಾಕ್ಷ ಒಡೆಯರ ಅವರ ಭಾವಚಿತ್ರದ ಮೆರವಣಿಗೆಯು ಪ್ರಾರಂಭಗೊಂಡು ನಂತರ ತುಂಗಭದ್ರ ನದಿ ತಟದಲ್ಲಿರುವ ಚೌಡಯ್ಯನವರ ಐಕ್ಯ ಮಂಟಪಕ್ಕೆ ಬಂದು ತಲುಪಿತು.
ಅಭಿಷೇಕದ ನಂತರ ಶ್ರೀಗಳನ್ನು ಶೃಂಗರಿಸಿದ ದೋಣೆಯಲ್ಲಿ ಕರೆದೋಯ್ದು ನದಿಯ ಮಧ್ಯದಲ್ಲಿರುವ ಈಶ್ವರ ಲಿಂಗುವಿಗೆ ಪೂಜೆಯನ್ನು ಸಲ್ಲಿಸಲಾಯಿತು. ಮೆರವಣಿಗೆಯಲ್ಲಿ ಜಾಂಜ್ ಮೇಳ, ಭಜನೆ ಸೇರಿದಂತೆ ವಿವಿಧ ವಾದ್ಯವೃಂದಗಳು ಭಾಗವಹಿಸಿ ಮೆರವಣಿಗೆಗೆ ಮೆರಗು ತಂದವು. ಗ್ರಾಮಸ್ಥರು, ಶರಣ ಚೌಡಯ್ಯನವರ ಭಕ್ತರು, ಮಹಿಳೆಯರು ಸೇರಿದಂತೆ ಸಹಸ್ರಾರು ಭಕ್ತರು ಧಾರ್ಮಿಕ ಪೂಜಾ ಕಾರ್ಯಕ್ರಮಗಳಲ್ಲಿ ಇದ್ದರು. ನಂತರ ಶ್ರೀಗಳ ಮಠದಲ್ಲಿ ಅನ್ನಸಂತರೆ್ಣ ನಡೆಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 