ಚುಟುಕು ಸಾಹಿತ್ಯ ಬಳಗದ ವತಿಯಿಂದ ನೂತನ ಅಧ್ಯಕ್ಷರಿಗೆ ಗೌರವ
Chutuku Sahitya Balaga pays tribute to new president
ಚುಟುಕು ಸಾಹಿತ್ಯ ಬಳಗದ ವತಿಯಿಂದ ನೂತನ ಅಧ್ಯಕ್ಷರಿಗೆ ಗೌರವ
ಹಾವೇರಿ 23 : ನಗರದ ಕಚುಸಾಪ ಕಛೇರಿಯಲ್ಲಿ ಸವಣೂರು ತಾಲೂಕಿನ ಹಿರೇಮುಗದೂರ ಗ್ರಾಮದ ನಿವಾಸಿಗಳು, ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರು,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯರು,ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಸಹಕಾರ್ಯದರ್ಶಿಗಳು,ಹಿರೇಮುಗದೂರ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ ಎಂ ಆರೇರ ಅವರನ್ನು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸವಣೂರ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಚುಸಾಪ ಜಿಲ್ಲಾದ್ಯಕ್ಷರಾದ ವಿರೂಪಾಕ್ಷ ಲಮಾಣಿ,ಪ್ರಧಾನ ಕಾರ್ಯದರ್ಶಿಗಳಾದ ಡಾ. ಗಂಗಯ್ಯ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚುಟುಕು ಸಾಹಿತ್ಯ ಬಳಗದ ವತಿಯಿಂದ ನೂತನ ಅಧ್ಯಕ್ಷರಿಗೆ ಗೌರವಿಸಿ ಸನ್ಮಾನಿಸಲಾಯಿತು. ನೇಮಕ ಮಾಡಿದ ಕಚುಸಾಪ ಜಿಲ್ಲಾಧ್ಯಕ್ಷರಿಗೆ ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ನೂತನ ಅಧ್ಯಕ್ಷರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಡಿವೈಎಪ್ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರ ಇದ್ದರು.ನೂತನ ಸವಣೂರು ತಾಲ್ಲೂಕು ಅಧ್ಯಕ್ಷರಾದ ನಿಂಗಪ್ಪ ಎಂ ಆರೇರ ಅವರಿಗೆ ಸಾಹಿತ್ಯ ಬಳಗ,ಸ್ನೇಹ ಬಳಗ ಹಾಗೂ ಹಿತೈಷಿಗಳು ಶುಭ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 