ಕಾಲೇಜು ವಿದ್ಯಾರ್ಥಿಗಳಿಂದ ಹಿರಣ್ಯಕೇಶಿ ನದಿಯಲ್ಲಿ ಸ್ವಚ್ಛತಾ ಅಭಿಯಾನ
College students launch cleanliness drive in Hiranyakeshi River
ಕಾಲೇಜು ವಿದ್ಯಾರ್ಥಿಗಳಿಂದ ಹಿರಣ್ಯಕೇಶಿ ನದಿಯಲ್ಲಿ ಸ್ವಚ್ಛತಾ ಅಭಿಯಾನ
ಯಮಕನಮರಡಿ 12: ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಬಡಕುಂದ್ರಿ ಹೊಳೆಮ್ಮ ದೇವಸ್ಥಾನದ ಆವರಣ ಹಾಗೂ ಹಿರಣ್ಯಕೇಶಿ ನದಿ ದಂಡೆಯ ಸ್ವಚ್ಛತಾ ಕಾರ್ಯ ಹಾಗೂ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನಿಂದ ವಿಶೇಷ ಖಾಸಗಿ ಬಸ್ನಲ್ಲಿ ತೆರಳಿದ ಎನ್.ಎಸ್.ಎಸ್.ಸ್ವಯಂ ಸೇವಕರು ನಿಸ್ವಾರ್ಥತೆಯಿಂದ ನದಿಯ ಸುತ್ತಮುತ್ತಿನ ಕಸ ಪ್ಲಾಸ್ಟಿಕ್ ಹಾಗೂ ನದಿಯ ದಂಡೆಯಲ್ಲಿ ಭಕ್ತರು ಎಸೆದಿದ್ದ ಬಟ್ಟೆಗಳನ್ನು ನದಿಗೆ ಇಳಿದು ಸ್ವಚ್ಛಗೊಳಿಸಿದರು.
ಕಾರ್ಯಕ್ಕೆ ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಹಾಗೂ ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್.ತಬರಿ ಕೈ ಜೋಡಿಸಿ ನದಿ ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ವಸ್ತ್ರಗಳನ್ನು ಹೊರತೆಗೆದು ಸ್ವಚ್ಛಗೊಳಿಸಿದರು. ಅದರಂತೆ ದೇವಸ್ಥಾನದ ಆವರಣ ಚರಂಡಿಗಳ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಸ್ವಯಂ ಸೇವಕರ ಈ ಸ್ವಚ್ಛತಾ ಕಾರ್ಯದ ವಿಶೇಷತೆಯನ್ನು ಹೊಳೆಮ್ಮ ದೇವಸ್ಥಾನದ ಟ್ರಸ್ಟಿಗಳು ಹಾಗೂ ಗ್ರಾಮಸ್ಥರು ಕೊಂಡಾಡಿ ಕೃತಜ್ಞತೆ ಸಲ್ಲಿಸಿದರು.
ಈ ವಿಶೇಷ ಸ್ವಚ್ಛತಾ ಕಾರ್ಯಕ್ರಮದ ನಂತರ ಅಲ್ಲಿಗೆ ಬರುವ ಭಕ್ತರಿಗೆ ನದಿಯ ನೀರಿನಲ್ಲಿ ಬಟ್ಟೆಗಳನ್ನು ಬಿಸಾಡದಂತೆ ಹಾಗೂ ನದಿ ತೀರವನ್ನು ಸ್ವಚ್ಛವಾಗಿಡುವಂತೆ ಜಾಗೃತಿ ನೀಡಲಾಯಿತು. ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಹಾಗೂ ಎಸ್.ಆರ್.ತಬರಿ ಸ್ವಯಂ ಸೇವಕರನ್ನು ಹುರಿದುಂಬಿಸುತ್ತ ಸ್ವಚ್ಛತಾ ಕಾರ್ಯ ಯಶಸ್ವಿಗೊಳಿಸಿದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 