ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
Commemoration Day of Immortal Sculptor Jakanachari
ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಬೆಳಗಾವಿ 01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬುಧವಾರ (ಜ.1) ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ದೇಶದ ಮಾಜಿ ಪ್ರಧಾನ ಮಂತ್ರಿಗಳಾದ ಡಾ.ಮನಮೋಹನ ಸಿಂಗ್ ಅವರ ನಿಧನದಿಂದಾಗಿ ಶೋಕಾಚರಣೆ ಜಾರಿ ಇರುವ ಹಿನ್ನಲೆಯಲ್ಲಿ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಗೌರವ ಸಲ್ಲಿಸಿ, ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕ ಉಪ ಆಯುಕ್ತ ಉದಯಕುಮಾರ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿಧ್ಯಾವತಿ ಭಜಂತ್ರಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 