ಉನ್ನತೀಕರಿಸಿದ ನೂತನ ಪ್ರೌಢಶಾಲೆ ಪ್ರಾರಂಭೋತ್ಸವ, ಉದ್ಘಾಟನೆ
Commencement ceremony and inauguration of the newly upgraded high school
ರಾಯಬಾಗ, 03 : ಗ್ರಾಮೀಣ ಪ್ರದೇಶದ ಪ್ರಮುಖವಾಗಿ ಹೆಣ್ಣು ಮಕ್ಕಳು ಪ್ರೌಢಶಾಲೆ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢಶಾಲೆ ಪ್ರಾರಂಭಿಸುತ್ತಿದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹೇಳಿದರು.
ಸೋಮವಾರ ತಾಲೂಕಿನ ಮಂಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉನ್ನತೀಕರಿಸಿದ ನೂತನ ಪ್ರೌಢಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಶಾಲೆಗೆ, ಗ್ರಾಮಕ್ಕೆ ಕೀರ್ತಿ ತರಬೇಕೆಂದರು. ಶಾಸಕ ಡಿ.ಎಮ್. ಐಹೊಳೆ ಮಾತನಾಡಿ, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗಲು ಸರ್ಕಾರ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿದೆ. ಶಾಲೆ ಪ್ರಗತಿಗಾಗಿ ಗ್ರಾಮಸ್ಥರು, ಶಿಕ್ಷಕರು, ಪಾಲಕರು ಮತ್ತು ಎಸ್.ಡಿ.ಎಮ್.ಸಿ ಯವರು ಕೈಜೋಡಿಸಬೇಕೆಂದು ಹೇಳಿದರು.
ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಜೊತೆಗೆ, ಒಳ್ಳೆಯ ಸಂಸ್ಕಾರ ನೀಡಬೇಕೆಂದರು.ಭೆಂಡವಾಡ ವಿರಕ್ತಮಠದ ಗುರುಸಿದ್ದ ಸ್ವಾಮೀಜಿಯವರು ಸಾನಿಧ್ಯ ವಹಿಸಿದ್ದರು. ಬಿಇಒ ಬಸವರಾಜಪ್ಪ ಆರ್, ಎಸ್.ಡಿ.ಎಮ್.ಸಿ ಅಧ್ಯಕ್ಷ ರಾಮಚಂದ್ರ ಉಪ್ಪಾರ, ಗ್ರಾ.ಪಂ.ಅಧ್ಯಕ್ಷೆ ಶೋಭಾ ಮೇಗಾಡೆ, ಸದಸ್ಯೆ ಮಲ್ಲವ್ವ ಮೇಟಿ, ಪಿ.ಎಸ್.ಐ ನರಸಿಂಹರಾಜು, ಶಿವು ಪಾಟೀಲ, ಅಪ್ಪಾಸಾಬ ದೇಸಾಯಿ, ಬಸಪ್ಪ ಮುಗಳಿ, ಸದಾಶಿವ ಕೊಳವಿ, ವಿನೋದ ಚವ್ಹಾನ, ಆರಿ್ಪ.ಲಮಾಣಿ ಹಾಗೂ ಶಿಕ್ಷಕರು, ಎಸ್.ಡಿ.ಎಮ್.ಸಿ ಸದಸ್ಯರು, ಗ್ರಾಮದ ಮುಖಂಡರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 