ಸಮಾಜ ಮತ್ತು ನಾಗರಿಕರ ರಕ್ಷಣೆಗೆ ಬದ್ಧ : ಕೆ.ಹೊನ್ನೂರವಲಿಸಾಬ್
Committed to protecting society and citizens: K. Honnuravalisab
ಕಂಪಿ 07: ಗೃಹರಕ್ಷಕ ದಳದ ಸಿಬ್ಬಂದಿಗಳು ಪೊಲೀಸ್ ಇಲಾಖೆಯ ನೆರಳಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದು, ಸಮಾಜ ಮತ್ತು ನಾಗರಿಕರ ರಕ್ಷಣೆಗೆ ಬದ್ಧವಾಗಿದೆ ಎಂದು ಗೃಹ ರಕ್ಷಕದಳದ ಘಟಕಾಧಿಕಾರಿ ಕೆ.ಹೊನ್ನೂರವಲಿಸಾಬ್ ಹೇಳಿದರು. ಪಟ್ಟಣದ ಗೃಹ ರಕ್ಷಕದಳದ ಕಛೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಹಾಗೂ 63ನೇ ಗೃಹ ರಕ್ಷಕದಳದ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಸ್ವಯಂಸೇವಕರಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರ ಕಾರ್ಯವೈಖರಿ ಶ್ಲಾಘನೀಯವಾಗಿದೆ. ಗೃಹರಕ್ಷಕ ದಳದ ದಿನಾಚರಣೆಯನ್ನು ಪ್ರತಿ ವರ್ಷ ಡಿಸೆಂಬರ್ 6ರಂದು ಆಚರಿಸಲಾಗುತ್ತಿದೆ. ಗೃಹರಕ್ಷಕರು ಮತ್ತು ನಾಗರಿಕ ರಕ್ಷಣಾ ಪಡೆಗಳ ಮಹತ್ವದ ಸೇವೆಯನ್ನು ಸ್ಮರಿಸುವ ದಿನವಾಗಿದೆ, ವಿಶೇಷವಾಗಿ ಕಾನೂನು ಸುವ್ಯವಸ್ಥೆ, ಜೀವ ರಕ್ಷಣೆ ಮತ್ತು ವಿಪತ್ತು ನಿರ್ವಹಣೆಯಲ್ಲಿ ಅವರ ಪಾತ್ರವನ್ನು ಗುರುತಿಸಲಾಗುತ್ತದೆ ಎಂದರು. ನಂತರ ಜಾಗೃತಿ ಜಾಥಾ ನಡೆಯಿತು ಎಂದರು. ಈ ಸಂದರ್ಭದಲ್ಲಿ ಪಿಎಲ್ಸಿ ಹೆಚ್.ಗಿರಿಧರ, ಸೆಕ್ಷನ್ ಲೀಡರ್ ಕೆ.ಜಗದೀಶ ಸೇರಿದಂತೆ ಸಿಬ್ಬಂದಿ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 