ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ ಕೆ.ಆರ್.ಐ.ಡಿ.ಎಲ್. ಪ್ರಗತಿ ಪರೀಶೀಲನಾ ಸಭೆ
Complete the works quickly: ZP CEO Rahul Shinde KRIDL progress review meeting
ಬೆಳಗಾವಿ, ಜ.31 : ಕೆ.ಆರ್.ಐ.ಡಿ.ಎಲ್. (ಕರ್ನಾಟಕ ರೂರಲ್ ಇನಫ್ರಾಸ್ಟ್ರಕ್ಚರ್ ಡೆವಲಪಮೆಂಟ್ ಲಿಮಿಟೆಡ್) ವತಿಯಿಂದ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.
ನಗರದ ಕೆ.ಆರ್.ಐ.ಡಿ.ಎಲ್. ವಲಯ ಕಚೇರಿಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಯಮಾನುಸಾರ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಸೂಚಿಸಿದರು.ಅನುಮೋದನೆ ಆಗಿದ್ದರು ಕೂಡ ಇನ್ನೂ ಆರಂಭವಾಗದ ಕಾಮಗಾರಿಗಳಿಗೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಮೊದಲ ಆದ್ಯತೆ ನೀಡಿ ಭೇಟಿ ನೀಡಬೇಕು. ಕಾಮಗಾರಿಗಳು ಆರಂಭವಾಗದಿರಲು ಇರುವ ಕಾರಣಗಳ ಬಗ್ಗೆ ತಿಳಿದುಕೊಂಡು, ಅವುಗಳನ್ನು ಇತ್ಯರ್ಥಪಡಿಸಿಕೊಂಡು ತ್ವರಿತವಾಗಿ ಕಾಮಗಾರಿ ಆರಂಭಿಸಬೇಕು ಎಂದು ನಿರ್ದೇಶನ ನೀಡಿದರು.
ಗುಣಮಟ್ಟದ ಕಾಮಗಾರಿ ಕೈಗೊಳ್ಳಿ:
ಕಾಮಗಾರಿಗಳ ಉದ್ಘಾಟನೆ ಸಂದರ್ಭದಲ್ಲಿ ಅಳವಡಿಸುವ ಶಿಲಾಫಲಕಗಳಲ್ಲಿ ಕಡ್ಡಾಯವಾಗಿ ನಿಯಮಾನುಸಾರ (ಪ್ರೋಟೋಕಾಲ್) ಸಂಬಂಧಪಟ್ಟವರ ಹೆಸರುಗಳನ್ನು ಬರೆಸಬೇಕು. ಸಾರ್ವಜನಿಕರಿಂದ ದೂರುಗಳು ಬಾರದಂತೆ ಸಮರ್ಕ ಹಾಗೂ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಗ್ರಾಮ ವಿಕಾಸ ಯೋಜನೆ, ಮಲೆನಾಡು ಅಭಿವೃದ್ಧಿ ಯೋಜನೆ, ಬಯಲುಸೀಮೆ ಅಭಿವೃದ್ಧಿ ಯೋಜನೆ ಸೇರಿ ವಿವಿಧ ಯೋಜನೆಗಳಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದು, ಪ್ರಗತಿ ಸಾಧಿಸಲು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಬಸವರಾಜ ಅಡವಿಮಠ (ಅಭಿವೃದ್ಧಿ), ಕೆ.ಆರ್.ಐ.ಡಿ.ಎಲ್. ಅಧೀಕ್ಷಕ ಅಭಿಯಂತರ ಸಿದ್ಧಾರ್ಥ ಎಸ್., ಬೆಳಗಾವಿ ಕಾರ್ಯಪಾಲಕ ಅಭಿಯಂತರ ಎಸ್.ಬಿ. ಶೇಗುಣಸಿ, ಚಿಕ್ಕೋಡಿ ಕಾರ್ಯಪಾಲಕ ಅಭಿಯಂತರರಾದ ಆರ್.ಪಿ. ನಾರಾಯಣಕರ್ ಸೇರಿ ಎಲ್ಲ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು ಹಾಗೂ ಇನ್ನಿತರ ಸಿಬ್ಬಂದಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 