ಪಾರದರ್ಶಕ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ
Conduct a transparent investigation and demand action against the culprits
ಇಂಡಿ 12: ಚಡಚಣ ತಾಲೂಕಿನ ನಿವರಗಿ ಗ್ರಾಮದ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹೆಡ್ಕುಕ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಇತ್ತೀಚೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಇಲಾಖೆಯಿಂದ ಸೂಕ್ತ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕೆಂದು ರಾಷ್ಟೀಯ ಮಾನವ ಹಕ್ಕುಗಳ ತನಿಖಾ ಸಮೀತಿ (ರಿ) ಪದಾಧಿಕಾರಿಗಳು ಮಂಗಳವಾರ ಇಂಡಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಉಮೇಶ ಲಮಾಣಿ ಅವರಿಗೆ ಮನವಿ ಸಲ್ಲಿಸಿದರು.
ಸಮಿತಿಯ ಅಧ್ಯಕ್ಷ ಶಿವಾನಂದ ಕಾಮಗೊಂಡ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ಹೆಡ್ಕುಕ್ ಭಗವಾನ್ ಕಿಸನ್ಸಿಂಗ್ ಪರದೇಶಿ ಅವರು 27 ವರ್ಷಗಳಿಂದ ನಿವರಗಿ ಹೆಡ್ಕುಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿಲಯದ ವಾರ್ಡನ್ ಮಲ್ಲಪ್ಪ ವಾಲೀಕಾರ ಅವರು ಹೆಡ್ಕುಕ್ಗೆ ಮಾನಸೀಕ ಕಿರುಕುಳ ಕೊಡುತ್ತಿದ್ದರು ಎಂದು ಮೃತನ ಪತ್ನಿ, ಮಕ್ಕಳು ಪೊಲೀಸ್ ದೂರು ದಾಖಲಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಹ ತನಿಖೆ ನಡೆಸಿ ತಪ್ಪಿತಸ್ಥ ವಾರ್ಡನ್ ವಿರುಧ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಸಮಿತಿಯ ಉಪಾಧ್ಯಕ್ಷ ಪ್ರಕಾಶ ಬಿರಾದಾರ, ಜಂಟಿ ಕಾರ್ಯದರ್ಶಿ ಶೈಲೇಶ ಬೀಳಗಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರತೀ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದಲ್ಲಿನ ವ್ಯವಸ್ಥೆ ಪರೀಶೀಲಿಸಬೇಕು. ಮಕ್ಕಳ ಹಾಗೂ ಅಲ್ಲಿನ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಬೇಕು. ವಸತಿ ನಿಲಯಗಳಲ್ಲಿನ ಸಮಸ್ಯೆ ಬಗೆಹರಿಸಬೇಕು ಎಂದರು. ಈ ಸಂದರ್ಭದಲ್ಲಿ ರಾಷ್ಟೀಯ ಮಾನವ ಹಕ್ಕುಗಳ ತನಿಖಾ ಸಮೀತಿಯ ಪದಾಧಿಕಾರಿಗಳಾದ ಪ್ರಸನ್ನಕುಮಾರ ನಾಡಗೌಡ, ಶ್ರೀಮಂತ ಬಿರಾದಾರ ಇದ್ದರು.
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ 