ಕುಮಾರಸ್ವಾಮಿಯವರಿಂದ ವಿಶ್ವಾಸಮತಯಾಚನೆ ಸ್ವಾಗತಾರ್ಹ: ಯಡಿಯೂರಪ್ಪ
ಬೆಂಗಳೂರು: ಮೈತ್ರಿ ಸರಕಾರ ಪತನ ನಿಶ್ಚಿತ. ಆದರೂ ವಿಶ್ವಾತಮತ ಯಾಚಿಸುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ ಮೈತ್ರಿ ಸರಕಾರದ ದುರಾಡಳಿತದಿಂದ ಬೇಸತ್ತಿರುವ ಮತ್ತಷ್ಟು ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಹೀಗಾಗಿ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಮೈತ್ರಿ ಸರಕಾರ ಕೆಲವೇ ದಿನಗಳಲ್ಲಿ ಬೀಳಲಿದೆ ಎಂದು ಬೆಂಗಳೂರಿನಲ್ಲಿಂದು ಹೇಳಿದ್ದಾರೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ರಾಜಕೀಯ ಷಡ್ಯಂತ್ರ ಮಾಡಿದ್ದಾರೆ. ರಾಜ್ಯ ಸರಕಾರಕ್ಕೆ ಬಹುಮತವಿಲ್ಲ. ಇಂತಹ ವೇಳೆ ಅವರು ವಿಶ್ವಾಸಮತಯಾಚಿಸುವುದರಲ್ಲಿ ಅರ್ಥವೆ ಇಲ್ಲ. ಇಡೀ ವಾತಾವರಣ ನಮಗೆ ಅನುಕೂಲಕರವಾಗಿದೆ. ಆದರೂ ಕುಮಾರಸ್ವಾಮಿ ಧೈರ್ಯ ಮಾಡಿ ವಿಶ್ವಾಸಮತಯಾಚಿಸುವುದಾಗಿ ಹೇಳಿದ್ದಾರೆ. ಅದನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 