ಸಾರಿಗೆ ಬಸ್ ಸೌಕರ್ಯ ಕಲ್ಪಿಸಿದ್ದಕ್ಕೆ ಅಭಿನಂದನೆ
Congratulations on providing transport bus facilities.
ತಾಳಿಕೋಟಿ 08: ಪಟ್ಟಣದಿಂದ ದೇವರ ಹಿಪ್ಪರಗಿಗೆ ರಸ್ತೆ ಸಾರಿಗೆ ಬಸ್ ಸೌಕರ್ಯ ಕಲ್ಪಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮಾಡಿದ ಮನವಿಗೆ ಸ್ಪಂದಿಸಿದ್ದಕ್ಕಾಗಿ ಸೇನೆಯು ವಿಜಯಪುರ ಕೆಎಸ್ಆರ್ಟಿಸಿ ಡಿಸಿ ಅವರಿಗೆ ಅಭಿನಂದಿಸಿದೆ. ತಾಳಿಕೋಟಿ ಪಟ್ಟಣದಿಂದ ದೇವರ ಹಿಪ್ಪರಗಿಗೆ ಪ್ರಯಾಣಿಸಲು ಕಡಿಮೆ ಬಸ್ಸುಗಳು ಇರುವುದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಇದನ್ನು ತಪ್ಪಿಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯು ಬಸ್ ಸೌಕರ್ಯವನ್ನು ಕಲ್ಪಿಸಿ ಕೊಡುವಂತೆ ತಾಳಿಕೋಟಿ ಘಟಕ ವ್ಯವಸ್ಥಾಪಕರ ಮೂಲಕ ವಿಜಯಪುರ ಕೆ ಎಸ್ ಆರ್ ಟಿ ಸಿ ಡಿಸಿ ಅವರಲ್ಲಿ ಮನವಿ ಮಾಡಿತ್ತು ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಬಸ್ ಸೌಕರ್ಯ ನೀಡುವಂತೆ ಆದೇಶ ಹೊರಡಿಸಿದ್ದು ನವಂಬರ್ 7 ರಿಂದ ಬಸ್ ಬಿಡಲು ನಿರ್ಧರಿಸಲಾಗಿದೆ. ಸಂಘಟನೆಯ ಸದರಿ ಮನವಿಗೆ ಸ್ಪಂದಿಸಿದ್ದಕ್ಕಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿಗಳಾದ ಶರಣು ಜಮಖಂಡಿ, ವಿಜಯಪುರ ಜಿಲ್ಲಾ ಅಧ್ಯಕ್ಷರಾದ ಸುಖದೇವ್ ಕಟ್ಟಿಮನಿ, ಮಹೇಶ್ ಬಾಗೇವಾಡಿ ಹಾಗೂ ಸೇನೆಯ ಪದಾಧಿಕಾರಿಗಳು ಡಿಸಿ ಹಾಗೂ ತಾಳಿಕೋಟಿ ಘಟಕ ವ್ಯವಸ್ಥಾಪಕರಿಗೆ ಕೃತಜ್ಞತೆ ಸಲ್ಲಿಸಿ ಅಭಿನಂದಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 