ಸಾರಿಗೆ ಬಸ್ ಸೌಕರ್ಯ ಕಲ್ಪಿಸಿದ್ದಕ್ಕೆ ಅಭಿನಂದನೆ
Congratulations on providing transport bus facilities.
ತಾಳಿಕೋಟಿ 08: ಪಟ್ಟಣದಿಂದ ದೇವರ ಹಿಪ್ಪರಗಿಗೆ ರಸ್ತೆ ಸಾರಿಗೆ ಬಸ್ ಸೌಕರ್ಯ ಕಲ್ಪಿಸುವಂತೆ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮಾಡಿದ ಮನವಿಗೆ ಸ್ಪಂದಿಸಿದ್ದಕ್ಕಾಗಿ ಸೇನೆಯು ವಿಜಯಪುರ ಕೆಎಸ್ಆರ್ಟಿಸಿ ಡಿಸಿ ಅವರಿಗೆ ಅಭಿನಂದಿಸಿದೆ. ತಾಳಿಕೋಟಿ ಪಟ್ಟಣದಿಂದ ದೇವರ ಹಿಪ್ಪರಗಿಗೆ ಪ್ರಯಾಣಿಸಲು ಕಡಿಮೆ ಬಸ್ಸುಗಳು ಇರುವುದರಿಂದ ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಇದನ್ನು ತಪ್ಪಿಸಲು ಅಂಬೇಡ್ಕರ್ ಸ್ವಾಭಿಮಾನಿ ಸೇನೆಯು ಬಸ್ ಸೌಕರ್ಯವನ್ನು ಕಲ್ಪಿಸಿ ಕೊಡುವಂತೆ ತಾಳಿಕೋಟಿ ಘಟಕ ವ್ಯವಸ್ಥಾಪಕರ ಮೂಲಕ ವಿಜಯಪುರ ಕೆ ಎಸ್ ಆರ್ ಟಿ ಸಿ ಡಿಸಿ ಅವರಲ್ಲಿ ಮನವಿ ಮಾಡಿತ್ತು ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಬಸ್ ಸೌಕರ್ಯ ನೀಡುವಂತೆ ಆದೇಶ ಹೊರಡಿಸಿದ್ದು ನವಂಬರ್ 7 ರಿಂದ ಬಸ್ ಬಿಡಲು ನಿರ್ಧರಿಸಲಾಗಿದೆ. ಸಂಘಟನೆಯ ಸದರಿ ಮನವಿಗೆ ಸ್ಪಂದಿಸಿದ್ದಕ್ಕಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿಗಳಾದ ಶರಣು ಜಮಖಂಡಿ, ವಿಜಯಪುರ ಜಿಲ್ಲಾ ಅಧ್ಯಕ್ಷರಾದ ಸುಖದೇವ್ ಕಟ್ಟಿಮನಿ, ಮಹೇಶ್ ಬಾಗೇವಾಡಿ ಹಾಗೂ ಸೇನೆಯ ಪದಾಧಿಕಾರಿಗಳು ಡಿಸಿ ಹಾಗೂ ತಾಳಿಕೋಟಿ ಘಟಕ ವ್ಯವಸ್ಥಾಪಕರಿಗೆ ಕೃತಜ್ಞತೆ ಸಲ್ಲಿಸಿ ಅಭಿನಂದಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 