ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ  Congratulations to the students who won the championship title in the state level sports event.

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ   

ಬೆಳಗಾವಿ 29: ಗೋಕಾಕ ತಾಲೂಕಿನ ತವಗ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಯ 31 ವಿದ್ಯಾರ್ಥಿಗಳು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದೇವರಕೊಟ್ಟದ ಇ.ಎಂ.ಆರ್‌.ಎಸ್ ಶಾಲೆಯಲ್ಲಿ ಜರುಗಿದ 2025 ನೇ ಸಾಲಿನ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ನಾಲ್ಕು ದಿನಗಳ ಕಾಲ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ಎಲ್ಲಾ ವಿದ್ಯಾರ್ಥಿಗಳಿಗೆ , ದೈಹಿಕ ಶಿಕ್ಷಕರಾದ ರಾಜೇಶ್ ಡಿ , ಜಯಶ್ರೀ ಎಂ ಅವರಿಗೆ ರಾಜ್ಯ ಬುಡಕಟ್ಟು ಕಲ್ಯಾಣ ಇಲಾಖೆಯ ನಿರ್ದೇಶಕರಾದ ಯೋಗೇಶ್ ಟಿ , ಅಧಿಕಾರಿಗಳಾದ ಅನಸೂಯಾ, ಕನ್ನಯ್ಯ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲ ಮಹೇಂದರ ಸಿಂಗ್ ಮತ್ತು ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.