ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಣ್ಣು ಮುಚ್ಚಿ ಕುಳಿತುಕೊಂಡಿದೆ, ಹೇಮಲತಾ ನಾಯಕ್ ಆರೋಪ
Congress government in the state is sitting with its eyes closed, alleges Hemalatha Nayak
ಕೊಪ್ಪಳ 31: ರಾಜ್ಯದಲ್ಲಿ ಡ್ರಗ್ಸ್ ಜಾಲ ವಿಸ್ತರಿಸಿದ್ದು ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ದಾಳಿ ನಡೆಸಿ ಅಮಲಿನ ಜಾಲ ಭೇದಿಸಿದ್ದು ರಾಜ್ಯ ಪೊಲೀಸರಿಗೆ ಮಾಹಿತಿ ಇಲ್ಲದಿರುವುದು ನಾಚಿಕಗೇಡಿನ ಕೆಲಸ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ಮಂಗಳವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಮೂರು ಡ್ರಗ್ ಕಾರ್ಖಾನೆ ಪತ್ತೆಯಾಗಿವೆ. 56 ಕೋಟಿ ರೂ. ಮೌಲ್ಯದ ಕಚ್ಛಾ ವಸ್ತು ದೊರೆತಿವೆ. ಮೂವರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ರಾಜಧಾನಿಯಲ್ಲಿ ಇಷ್ಟೆಲ್ಲ ನಡೆಯುತ್ತಿದ್ದರೂ ಸರ್ಕಾರದ ಗಮನಕ್ಕಿಲ್ಲವಾ ? ಅಥವಾ ಇವರೇ ಬೆಂಬಲ ನೀಡುತ್ತಿದ್ದಾರ ಎಂಬುದನ್ನು ಸ್ಪಷ್ಟಪಡಿಸಬೇಕು. ಶಾಲಾ ಮಕ್ಕಳ ಕೈಗೂ ಸುಲಭವಾಗಿ ಡ್ರಗ್ಸ್ ದೊರೆಯುತ್ತಿದೆ. ಮದ್ಯ ಮಾರಾಟ ಮಿತಿ ಮೀರಿದೆ.
ಇದಕ್ಕೆ ಕಡಿವಾಣ ಹಾಕುವ ಬದಲು ಕುಡಿದು ಬಿದ್ದವರನ್ನು ಮನೆಗೆ ತಲುಪಿಸಲಾಗುವುದೆಂದು ಗೃಹ ಸಚಿವರು ಹೇಳಿರುವುದು ಲಜ್ಜೆಗೇಡಿತ ಎಂದು ತರಾಟೆ ತೆಗೆದುಕೊಂಡರು. ಕೊಪ್ಪಳದಲ್ಲಿ ಶಿಲ್ಪಾ ಗ್ರ್ಗಾಂಡ್ ಹೋಟೆಲ್ ಹಿಂಭಾಗ, ಹಿಟ್ನಾಳ, ಮುನಿರಾಬಾದ್ ಹೀಗೆ ಎಲ್ಲ ಕಡೆಗಳಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ಕಳೆದ 5 ವರ್ಷದಲ್ಲಿ ಪತ್ತೆಯಾದ ಡ್ರಗ್ ಪ್ರಕರಣಗಳು, ವಶಪಡಿಸಿಕೊಂಡ ಗಾಂಜಾ ಮಾಹಿತಿಯನ್ನೂ ಸರಿಯಾಗಿ ನೀಡಿಲ್ಲ. ಅಧಿಕಾರಿಗಳು ನೀಡಿದ ಮಾಹಿತಿಯನ್ನು ಪರಾಮರ್ಶಿಸದೇ ಸಚಿವರು ಉತ್ತರ ಕೊಡುವ ಭಂಡತನ ಪ್ರದರ್ಶಿಸುತ್ತಿದ್ದಾರೆ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲೂ ಡ್ರಗ್ಸ್ ಜಾಲ ಹಬ್ಬಿದೆ. ಹಲವು ಜಿಲ್ಲೆಗಳಲ್ಲೂ ಪೆಡ್ಲಿಂಗ್ ನಡೆಯುತ್ತಿದೆ. ಇದಕ್ಕೆಲ್ಲ ಕಡಿವಾಣ ಬೀಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಪ್ರಮುಖರಾದ ನೀಲಕಂಠಯ್ಯ ಹಿರೇಮಠ, ಮಹೇಶ ಅಂಗಡಿ, ಪ್ರಸಾದ ಗಾಳಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 