ನ್ಯಾಯಾಲಯಗಳಿಗೆ ನಿರಂತರ ಬಾಂಬ್ ಬೆದರಿಕೆ ಹಿ ಆತಂಕಕಾರಿ ಬೆಳವಣಿಗೆ ಕ್ರಮಕ್ಕೆ ಆಗ್ರಹ
Constant bomb threats to courts, alarming development, calls for action
ಲೋಕದರ್ಶನ ವರದಿ
ಹಾವೇರಿ 29: ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ನಿರಂತರವಾಗಿ ಬರುತ್ತಿರುವುದು ಸಾರ್ವಜನಿಕರಲ್ಲಿ ಭಯ ಮತ್ತು ಆತಂಕವನ್ನು ಉಂಟುಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬೆದರಿಕೆ ಕರೆಗಳು ಮತ್ತು ಇಮೇಲ್ಗಳ ಮೂಲವನ್ನು ಪತ್ತೆಹಚ್ಚುವಲ್ಲಿ ತಕ್ಷಣ ಹಾಗೂ ಪರಿಣಾಮಕಾರಿಯಾಗಿ ಕ್ರಮ ಕೈಗೊಳ್ಳಬೇಕು ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ ರಾಜ್ಯ ಕಾರ್ಯದರ್ಶಿ ಬಸ್ವರಾಜ್ ಪೂಜಾರ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನ್ಯಾಯಾಲಯಕ್ಕೆ ಮೂರನೇ ಬಾರಿಗೆ ಬಾಂಬ್ ಬೆದರಿಕೆ ಕರೆ/ಇಮೇಲ್ ಬಂದಿದೆ ಎಂದು ತಿಳಿಸಿದ್ದಾರೆ. ಹಿಂದೆ ನಡೆದಿರುವ ದುಷ್ಕೃತ್ಯಗಳ ಹಿನ್ನೆಲೆಯನ್ನು ತನಿಖೆಯ ಮೂಲಕ ಪತ್ತೆಹಚ್ಚಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈ ರೀತಿಯ ನಿರಂತರ ಬೆದರಿಕೆಗಳಿಂದ ನ್ಯಾಯಾಲಯದ ವಾತಾವರಣದಲ್ಲಿ ಆತಂಕ ನಿರ್ಮಾಣವಾಗುತ್ತಿದ್ದು, ಕೋರ್ಟ್ ಕಲಾಪಗಳು ಕೆಲವೊಮ್ಮೆ ಸ್ಥಗಿತಗೊಳ್ಳುವ ಪರಿಸ್ಥಿತಿ ಉಂಟಾಗಿದೆ. ಇದರಿಂದ ವಕೀಲರು, ಕಕ್ಷಿದಾರರು ಹಾಗೂ ನ್ಯಾಯಾಲಯ ಸಿಬ್ಬಂದಿ ಹೊರಗೆ ಓಡಿ ಹೋಗುವಂತಹ ಭೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 