ಜಿಲ್ಲೆಯಲ್ಲಿ ಸತತ ಮಳೆ: ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಜಾಗೃತಿಯಿಂದ ಕಾರ್ಯನಿರ್ವಹಿಸಿ
ಗದಗ 06: ಜಿಲ್ಲೆಯಲ್ಲಿ ಸತತ ಮಳೆ ಆಗುತ್ತಿರುವ ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರು ಜಾಗೃತಿಯಿಂದ ಕಾರ್ಯನಿರ್ವಹಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ನಿಗಾವಹಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ವಿರೂಪಾಕ್ಷಪ್ಪ ರೆಡ್ಡಿ ಮಾದಿನೂರ ಸೂಚಿಸಿದರು.
ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಜಿಲ್ಲೆಯಲ್ಲಿಯ ಅತೀವೃಷ್ಟಿ ಹಾಗೂ ಅನಾವೃಷ್ಟಿ ಕುರಿತು ಜರುಗಿದ ಜಿಲ್ಲೆಯ ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತೆಯರ ತುತರ್ು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ಅಗತ್ಯದ ಕ್ರಮ ಜರುಗಿಸಲು ಸೂಚಿಸಿದರು. ಮಳೆಗಾಲದ ಈ ಸಂದರ್ಭದಲ್ಲಿ ನೀರು ಹಾಗೂ ಸುತ್ತಮುತ್ತಲಿನ ವಾತಾವರಣ ಕಲುಷಿತಗೊಳ್ಳದಂತೆ ಸ್ವಚ್ಛವಾಗಿಟ್ಟುಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯದ ಮುನ್ನೆಚ್ಚರಿಕೆ ಕ್ರಮ ಜರುಗಿಸಲು ವಿರೂಪಾಕ್ಷ ರೆಡ್ಡಿ ಮಾದಿನೂರ ಸೂಚಿಸಿದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಬಿ.ಎಮ್. ಗೋಜನೂರು ಮಾತನಾಡಿ ಮಳೆಗಾಲದಲ್ಲಿ ಕುಲಷಿತ ನೀರಿನಿಂದ ಮಲೇರಿಯಾ, ಡೆಂಗೀ ಜ್ವರ ಹರಡುವ ಸಂಭವವಿದ್ದು ಈ ಕುರಿತು ಸಾರ್ವಜನಿಕರಲ್ಲಿ ಅಗತ್ಯದ ಜಾಗೃತಿ ಮೂಡಿಸುವದರ ಜೊತೆಗೆ ತಾಲೂಕು ಹಾಗೂ ಗ್ರಾಮ ಪಂಚಾಯತ ಮಟ್ಟದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಹಾಗೂ ಸ್ವಚ್ಛ ಕುಡಿಯುವ ನೀರನ್ನು ಬಳಸುವಂತೆ ಜಾಗೃತಿ ಮೂಡಿಸಲು ಆರೋಗ್ಯ ಸಹಾಯಕರು ಹಾಗೂ ಆಶಾ ಕಾರ್ಯಕತರ್ೆಯರಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ.ಎಚ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಉಮೇಶ ಕರಮುಡಿ, ಜಿಲ್ಲಾ ಪುರುಷ ಹಾಗೂ ಮಹಿಳಾ ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತರು, ಸಭೆಯಲ್ಲಿ ಭಾಗವಹಿಸಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 