ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನ ಆಚರಣೆ
Constitution Day is celebrated on November 26 every year
ರಾಯಬಾಗ 26: ಭಾರತವು ಇಂದು ವಿಶ್ವಮಟ್ಟದಲ್ಲಿ ಗಮನಾರ್ಹ ಸ್ಥಾನ ಪಡೆದಿದ್ದರೆ, ಅದಕ್ಕೆ ನಮ್ಮ ಸಶಕ್ತವಾದ ಸಂವಿಧಾನವೇ ಕಾರಣವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಜಗದೀಶ ಬಿಸೆರೋಟ್ಟಿ ಹೇಳಿದರು.
ಬುಧವಾರ ಪಟ್ಟಣದ ವಕೀಲರ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ದೇಶದ ಆಡಳಿತ ಮತ್ತು ಜನರ ಚಿಂತನೆಯ ಚಾಲಕಶಕ್ತಿಯಾಗಿದೆ. ಇಂದಿನ ಯುವಕರು ಸಂವಿಧಾನ ಆಳವನ್ನು ಅರಿತುಕೊಂಡು, ಸಮಾಜದಲ್ಲಿ ಬೇರುಬಿಟ್ಟಿರುವ ಭ್ರಷ್ಟಾಚಾರವನ್ನು ಹೋಗಲಾಡಿಸಲು ಪಣತೊಡಬೇಕೆಂದು ಕರೆ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಪಿ.ಎಮ್.ದರೂರ ಮಾತನಾಡಿ, ಭಾರತೀಯ ಪ್ರಜೆಗಳಲ್ಲಿ ಸಂವಿಧಾನದ ಮೌಲ್ಯಗಳನ್ನು ಉತ್ತೇಜಿಸಲು ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ ಎಂದರು.
ಹಿರಿಯ ವಕೀಲರಾದ ಆರ್.ಎಸ್.ಶಿರಗಾಂವೆ, ಡಿ.ಎಚ್.ಯಲ್ಲಟ್ಟಿ ಸಂವಿಧಾನದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಸ.ಸ.ಅಭಿಯೋಜಕಾರ ಮಹಾವೀರ ಗಂಡವ್ವಗೋಳ, ಹನುಮಂತ ಹಾಚಮಟ್ಟಿ, ಛಾಯಾ ಬೇಡಕಿಹಾಳೆ, ಹಿರಿಯ ವಕೀಲರಾದ ಎ.ಬಿ.ಮಂಗಸೂಳೆ, ವಿ.ಎ.ಮೋರೆ, ಪಿ.ಎಮ್.ಪಾಟೀಲ, ಆರ್.ಎಚ್.ಗೊಂಡೆ, ಎಸ್.ಎಮ್.ಸಾರಂಗಿ, ಎಸ್.ಎಸ್.ಚೌಗಲಾ, ಬಿ.ಎಸ್.ಪಾಟೀಲ, ಆರ್.ಎ.ಗೆನ್ನೆನವರ, ಎಸ್.ಬಿ.ಹೊಳ್ಕರ, ಎಮ್.ಎಮ್.ಚಿಂಚಲಿಕರ, ಎ.ಬಿ.ನಾಗರಾಳೆ, ಎಸ್.ಬಿ.ಶ್ರೀಗೊಂಡ, ಎಸ್.ಎನ್.ಪಡತರಿ, ಬಿ.ಎಲ್.ಕೋಳಿಗುಡ್ಡೆ, ವಿ.ಎಮ್.ಗಲಗಲಿ, ಎಸ್.ಸಿ.ದಿಕ್ಷಿತ, ಜಿ.ಎಸ್.ಕಿಚಡೆ ಸೇರ ಹಿರಿಯ ಮತ್ತು ಕಿರಿಯ ವಕೀಲರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 