ಎಲ್ಲಾ ಪ್ರಜೆಗಳಿಗೆ ಸಂವಿಧಾನವೇ ಪವಿತ್ರ ಗ್ರಂಥ : ಎ.ಅಕ್ಕಮಹಾದೇವಿ
Constitution is the holy book for all citizens : A. Akkamahadevi
ಎಲ್ಲಾ ಪ್ರಜೆಗಳಿಗೆ ಸಂವಿಧಾನವೇ ಪವಿತ್ರ ಗ್ರಂಥ : ಎ.ಅಕ್ಕಮಹಾದೇವಿ
ಕಂಪ್ಲಿ 27: ಭಾರತ ವಿಶ್ವದಲ್ಲೇ ಅತಿ ದೊಡ್ಡ ಸಂವಿಧಾನ ಹೊಂದಿದ ದೇಶವಾಗಿದೆ ಎಂದು ಶಿಕ್ಷಕಿ ಎ.ಅಕ್ಕಮಹಾದೇವಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಕೋಟೆಯಲ್ಲಿ ಸ್ವಾಮಿ ವಿವೇಕಾನಂದ ಶಾಲೆಯಿಂದ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರಜೆಗಳಿಂದ, ಪ್ರಜೆಗಳಿಗೋಸ್ಕರ ನಡೆಸುವ ಆಡಳಿತವೇ ಪ್ರಜಾ ಪ್ರಭುತ್ವ. ಪ್ರಜಾಪ್ರಭುತ್ವವ ಜಾತ್ಯಾತೀಯತೆಯನ್ನು ಎತ್ತಿ ಹಿಡಿಯುತ್ತದೆ. ನಮ್ಮ ಸಂವಿಧಾನ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂದು ಮೂರು ಅಂಗಗಳಾಗಿ ವಿಭಜಿಸಲಾಗಿದೆ. ಸರ್ಕಾರ ಮಾಡುವ ಪ್ರತಿಯೊಂದು ಕಾನೂನು ಸಹ ಸಂವಿಧಾನಕ್ಕೆ ಅನುಗುಣವಾಗಿರಬೇಕು.
ಭಾರತ ದೇಶದ ಎಲ್ಲಾ ಪ್ರಜೆಗಳಿಗೆ ಸಂವಿಧಾನವೇ ಪವಿತ್ರ ಗ್ರಂಥವಾಗಿದೆ. ಅಂಬೇಡ್ಕರ್ ಬರೆದ ಸಂವಿಧಾನದಿಂದ ಎಲ್ಲರಿಗೂ ಸಮಾನತೆ ಬಂದಿದೆ. ದುರ್ಬಲ ವರ್ಗದವರು, ಹಿಂದುಳಿದ ವರ್ಗದವರು ಅಧಿಕಾರಕ್ಕೆ ಬರಲು ನಮ್ಮ ದೇಶದ ಸಂವಿಧಾನವೇ ಕಾರಣ ಎಂದರು. ಮುಖ್ಯಗುರು ಬಡಿಗೇರ್ ಜಿಲಾನ್ಸಾಬ್ ಇವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತ ದೇಶದ ಪ್ರಜೆಗಳು ಬೇರೆ, ಬೇರೆ ಜಾತಿ, ಧರ್ಮದಲ್ಲಿ ಹುಟ್ಟಿದ್ದರೂ ನಾವೆಲ್ಲರೂ ಭಾರತೀಯರಂತೆ, ಸಹೋದರರಂತೆ ಬದುಕೋಣ ಎಂದರು. ನಂತರ ಮಕ್ಕಳ ವಿವಿಧ ಛದ್ಮಾವೇಷದಲ್ಲಿ ಎಲ್ಲರ ಗಮನ ಸೆಳೆದರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಕೆ.ಶ್ವೇತಾ, ಎಂ.ಲಕ್ಷ್ಮಿ, ಎಂ.ವರ್ಷಾ, ಕೋಲ್ಕರ್ ಉಮಾ, ಸುನೀತಾ, ಮುಸ್ಕಾನ್, ಜೆ.ಅಕ್ಷತಾ, ಗೌಸಿಯಾ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 