ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಾಣ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಾಣ Construction of Vatsalya House by Dharmasthala Rural Development Project

 ಗದಗ  27:  ಜಿಲ್ಲೆಯ ಗದಗ ತಾಲೂಕಿನ  ಹೊಂಬಳ ವಲಯದ ಹುಯಿಲಗೋಳ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿದ್ದ  ಹುಸೇನಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ  ನಿರ್ಮಿಸಿ ಶನಿವಾರ  ಜಿಲ್ಲಾ ನಿರ್ದೇಶಕರಾದ ಕೇಶವ ದೇವಾಂಗ ಅವರು ಉದ್ಘಾಟನೆ ಮಾಡಿದರು.  ಈ ಸಂದರ್ಭದಲ್ಲಿ ತಾಲ್ಲೂಕಾ  ಯೋಜನಾಧಿಕಾರಿಗಳಾದ ಉಮಾ ಮತ್ತು ಕೊಪ್ಪಳ ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿಗಳಾದ ಸುಧಾ ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಊರಿನ ಗಣ್ಯರು ಮತ್ತು ನವಜೀವನ ಸಮಿತಿಯ ಸದಸ್ಯರು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸೇವಾ ಪ್ರತಿನಿಧಿಗಳು ಒಕ್ಕೂಟದವರು ಉಪಸ್ಥಿತರಿದ್ದರು.