ಸತತ ಪ್ರಯತ್ನ, ಪರಿಶ್ರಮ ಶ್ರೇಷ್ಠವ್ಯಕ್ತಿಯನ್ನಾಗಿಸುತ್ತದೆ: ಸಿ. ಎಮ್. ತ್ಯಾಗರಾಜ್
Continuous effort and perseverance make a great person: C. M. Thyagaraj
ಬೆಳಗಾವಿ 28: ಸತತ ಪರಿಶ್ರಮ ಶ್ರೇಷ್ಠ ವ್ಯಕ್ತಿಯನ್ನಾಗಿಸುತ್ತದೆ ಮತ್ತು ತಮ್ಮ ವ್ಯಕ್ತಿತ್ವವನ್ನ ರೂಪಿಸುತ್ತದೆ ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಸಿ. ಎಮ್. ತ್ಯಾಗರಾಜ್ ಹೇಳಿದರು. ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ನಲ್ಲಿ ಫೆ.28ರಂದು ಪರಂಪರಾ, ಉಬ್ಬಂಟು ಕನ್ಸೊರ್ಟಿಮ್ ,ಎಸ್ಕೇಪ್ ಮತ್ತು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ ದಿ ಡಿಜಿಟಲ್ ಟ್ರಾನ್ಸಸ್ಟಾರ್ಮೆಷನ್ ಇ ಕಾಮರ್ಸ್ ಮತ್ತು ಡಿಜಿಟಲ್ ಟ್ರಾನ್ಸಫಾರ್ಮೆಷನ್ ಟ್ರೈನಿಂಗ್ ಪ್ರೋಗ್ರಾಂ ಫಾರ್ ಉಮೆನ್ ಎಂಟರೆ್ರನರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ತಮ್ಮ ಶಕ್ತಿಯನ್ನ ಅರಿಯಬೇಕು, ಐದು ಜನ ಹೆಣ್ಣು ಮಕ್ಕಳ ವಿಚಾರ ಮಾಡಿದ್ರೆ ಮಾರುಕಟ್ಟೆ ಬರುತ್ತದೆ, ಐವತ್ತು ಜನ ಹೆಣ್ಣು ಮಕ್ಕಳು ವಿಚಾರ ಮಾಡಿದ್ರೆ ಮಾರ್ಕೆಟ್ ಮಾಲ್ ಬರುತ್ತದೆ. ಇವತ್ತು ಡಿಜಿಟಲ್ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ವ್ಯಕ್ತಿಗಳು ತಮ್ಮ ಭವಿಷ್ಯವನ್ನ ರೂಪಿಸಿಕೊಳ್ಳಬೇಕು, ನಮ್ಮ ಯೋಚನೆಯಂತೆ ಐಡಿಯಾಗಳು ಹೊಳೆಯುತ್ತವೆ.ಹೆಲ್ಪಿಂಗ್ ಹ್ಯಾಂಡ್ ಅವೇಷನರಿ ಮಾಡುತ್ತದೆ ಎಂದು ಹೇಳಿದ ಅವರು ನಮ್ಮ ಜೀವನದಲ್ಲಿ ಬದ್ಧತೆ ಮುಖ್ಯ ಎಂದರು.
ಈಗ ಸದ್ಯ ಉದ್ಯಮ ಡಿಜಿಟಲ್ ಮಾರ್ಕೆಟ್ ಆಗಿದೆ, ನಾವು ಜಾನರಾಗಿ ಜಾನ ಹೆಜ್ಜೆ ಇಡಬೇಕಿದೆ,ಆ ದಿಶೆಯಲ್ಲಿ ಹೆಜ್ಜೆ ಇಡಬೇಕಿದೆ ಎಂದರು. ಹೆಣ್ಣು ಮಕ್ಕಳು ಸಶಕ್ತರಾಗಬೇಕು ಆ ನಿಟ್ಟಿನಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹೊಸ ಹೆಜ್ಜೆ ಇಡುತ್ತಿದೆ. ವಿದ್ಯಾರ್ಥಿಗಳ ಕನಸು ನನಸಾದರೆ ದೇಶದ ಕನಸು ನನಸಾದಂತೆ, ನಮ್ಮೆಲ್ಲರಿಗೂ ಗ್ರಹಿಸುವ ಶಕ್ತಿ ಇರಬೇಕು ಅಂದಾಗ ಮಾತ್ರ ಉತ್ತಮ ಉದ್ಯಮಿಯಾಗಲು ಸಾಧ್ಯ ಎಂದು ಹೇಳಿದರು.
ನಿವೃತ್ತ ಋಖ ಅಧಿಕಾರಿ ರತ್ನಪ್ರಭಾ ಮಾತನಾಡಿ ಮಹಿಳೆಯರ ಶ್ರೇಯಸ್ಸು ಸ್ವಾವಲಂಬನೆಗಾಗಿ ಉಬ್ಬಂಟು ಸಂಸ್ಥೆ ಯಶಸ್ವಿಯಾಗಿ ಕೆಲಸ ಮಾಡಿ ಏಳನೇ ವರ್ಷಕ್ಕೆ ಪಾದಾರೆ್ಣ ಮಾಡುತ್ತಿದೆ ಎಂದರು.
ಜೋತಿ ಕೃಷ್ಣ ಮಾತನಾಡಿ ನಮ್ಮ ಯೋಜನೆ, ಯೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ. ನಮ್ಮ ಆಲೋಚನೆ ವಿವೇಚನೆಗಳು ಹೇಗೆ ರೂಪಗೊಳ್ಳುತ್ತದೆ ಎಂಬುದು ಮುಖ್ಯ, ಯಶಸ್ವಿಗೆ ಸತತ ಪ್ರಯತ್ನ ಮುಖ್ಯ ಡಿಜಿಟಲ್ ಮಾರ್ಕೆಟ್ನಲ್ಲಿ ಯಶಸ್ವಿಯಾಗುವುದು ಮುಖ್ಯ ಎಂದರು. ಪರಂಪರಾ ಸಂಸ್ಥೆಯ ಸ್ಥಾಪಕಿ ಪ್ರೀಯಾ ಪುರಾಣಿಕ, ಮಾಯರಾ ಸಂಸ್ಥೆಯ ಸ್ಥಾಪಕಿ ರೂಪಾ ದೇಸಾಯಿ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 