ಪ್ರಾಂತ ರೈತ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಬಗಲಿ
Contribute to the success of the Provincial Farmers' Conference: Bagali
ಪ್ರಾಂತ ರೈತ ಸಮ್ಮೇಳನ ಯಶಸ್ವಿಗೆ ಸಹಕರಿಸಿ: ಬಗಲಿ
ಇಂಡಿ 15: ಅಖಿಲ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಕರ್ನಾಟಕದ ಪ್ರಾಂತ ವತಿಯಿಂದ ಪ್ರಾಂತ ರೈತ ಸಮ್ಮೇಳನ ಕಾರ್ಯಕ್ರಮ ವಿಜಯಪೂರ ವೀರಶೈವ ಲಿಂಗಾಯತ ಕಲ್ಯಾಣ ಮಂಟಪ ಆವರಣದಲ್ಲಿ ಡಿಸೆಂಬರ್ 16, 17ರಂದು ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಾನ್ನಿಧ್ಯವನ್ನು ಅಮೃತಾನಂದ ಸ್ವಾಮಿಗಳು ಗುರುದೇವ ಆಶ್ರಯ ಬಾಲಗಾಂವ -ಕಾತ್ರಳ ಅವರು ಗೋ ಪೂಜೆ ಮಾಡಿ ಆಶೀರ್ವಚನ ನೀಡಲಿದ್ದಾರೆ. ನಂತರ ಎಲ್ಲಾ ರೈತರು ಕೂಡಿ ವಿಜಯಪೂರ ಸಿದ್ದೇಶ್ವರ ದೇವಾಲಯದಿಂದ ದರ್ಬಾರ್ ಹೈಸ್ಕೂಲವರೆಗೆ ಬೃಹತ್ ಮೆರವಣಿಗೆ ನಡೆಯಲಿದೆ. ಈ ನಂತರ ಎರಡು ದಿನಗಳ ಕಾಲ ರೈತ ಸಂಘದ ವಿವಿಧ ಪದಾಧಿಕಾರಿಗಳ ಜೊತೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಈ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಅಖಿಲ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಇಂಡಿ ತಾಲೂಕಿನ ಎಲ್ಲಾ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಅಖಿಲ ಭಾರತೀಯ ಕಿಸಾನ್ ಸಂಘದ ರಾಜ್ಯ ಕಾರ್ಯಕಾರಣಿ ಸದಸ್ಯ ಗುರುನಾಥ್ ಬಗಲಿ ಅವರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 