ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ

ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ

ಶಿಗ್ಗಾವಿ 04: ಪಟ್ಟಣದ ಸವಣೂರ ಸರ್ಕಲ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಎಸಿಬಿಯೊಂದಿಗೆ ಕೈ ಜೋಡಿಸಿ ಹಾಗೂ ಲಂಚ ಪಡೆಯುವುದು ಮತ್ತು ಕೊಡುವುದು ಶಿಕ್ಷಾರ್ಹ ಅಪರಾಧ ಎಂಬ ಗೋಷವಾಕ್ಯದೊಂದಿಗೆ ಭ್ರಷ್ಟಾಚಾರ ನಿಗ್ರಹದಳ ಪೋಲಿಸ್ ಠಾಣೆ ಹಾವೇರಿ ಇವರ ವತಿಯಿಂದ 2018 ರ ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ ಕಾರ್ಯಕ್ರಮ ದಡಿಯಲ್ಲಿ ಹಮ್ಮಿಕೊಂಡ ಬೀದಿ ನಾಟಕ ಕಾರ್ಯಕ್ರಮಕ್ಕೆ ಪತ್ರಕರ್ತರ ಸಂಘದ ತಾಲೂಕಾದ್ಯಕ್ಷ ರವಿ ಉಡುಪಿ ಅವರು ಶನಿವಾರ ಚಾಲನೆ ನೀಡಿದರು. 

ಭ್ರಷ್ಟಾಚಾರ ನಿಗ್ರಹದಳ ಪೋಲಿಸ್ ಠಾಣೆಯ ಸಿಬ್ಬಂದಿ ಹಾಜರಿದ್ದರು,  ಹುರುಳಿಕೊಪ್ಪಿ ಜಾನಪದ ಕಲಾ ತಂಡದ ಕಲಾವಿದರು ಬೀದಿ ನಾಟಕದಲ್ಲಿ ಭಾಗವಹಿಸಿದ್ದರು.