ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆಗೆ ಜಿಲ್ಲೆಯಲ್ಲಿ ಅರಿವು ಮೂಡಿಸಿ: ಡಿಸಿ ನಾಗೇಂದ್ರ ಪ್ರಸಾದ್.ಕೆ
Create awareness in the district to prevent atrocities against Scheduled Castes and Scheduled Tribe
ಬಳ್ಳಾರಿ 08: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ, ಶಿಕ್ಷೆ ಕುರಿತು ಜಿಲ್ಲೆಯಲ್ಲಿ ಎಲ್ಲ ಸಮುದಾಯಗಳ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಏರಿ್ಡಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ದೌರ್ಜನ್ಯ ಪ್ರಕರಣಗಳ ಕುರಿತು ಜಿಲ್ಲೆಯಲ್ಲಿ ದಲಿತ ಮುಖಂಡರ ಸಭೆ ಆಯೋಜಿಸಿ, ದೌರ್ಜನ್ಯ ಪ್ರಕರಣ ತಡೆ ಕುರಿತು ಅರಿವು ಮೂಡಿಸಬೇಕು. ಈ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ಸಹಾಯವಾಗುತ್ತದೆ ಎಂದರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆಯು ಸಾಕಷ್ಟು ದುರುಪಯೋಗವಾಗುತ್ತಿದೆ. ಇದರಿಂದ ನಿಜ ಪ್ರಕರಣಗಳಿಗೆ ಮೌಲ್ಯತೆ ಕಳೆದುಕೊಳ್ಳುತ್ತಿವೆ. ಹಾಗಾಗಿ ದೌರ್ಜನ್ಯ ಪ್ರಕರಣದ ನಿಖರ ಮಾಹಿತಿ ತಿಳಿದುಕೊಳ್ಳಬೇಕು. ಬಿ-ರಿಪೋರ್ಟ್ ಮಾಡುವುದಕ್ಕೂ ಮುನ್ನ ಸೂಕ್ತ ತನಿಖೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.ಭೂಮಿಗೆ ಸಂಬಂಧಿಸಿದಂತೆ ಜಾಸ್ತಿ ಪ್ರಕರಣ ಕಂಡುಬರುತ್ತಿವೆ. ದೌರ್ಜನ್ಯಕ್ಕೊಳಗಾದವರಿಗೆ ದೈಹಿಕ, ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬಬೇಕು. ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಗೆ ಮೀಸಲಾದ ಅನುದಾನ ಆಯಾ ಸಾಲಿನಲ್ಲಿಯೇ ವೆಚ್ಚವಾಗಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯ ತಲುಪಬೇಕು ಎಂದರು. ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದಪ್ಪ ಅವರು ಮಾತನಾಡಿ, ಜನವರಿ-2025 ರಿಂದ ಆಗಸ್ಟ್ 31 ರ ವರೆಗೆ 18 ಪ್ರಕರಣಗಳಲ್ಲಿ 26 ಸಂತ್ರಸ್ಥರಿಗೆ ಒಟ್ಟು ರೂ.22,75,000 ಪರಿಹಾರ ಮಂಜೂರು ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ಯಾವುದೇ ವಿಧದ ‘ಬಿ’ ರಿಪೋರ್ಟ್ ಪ್ರಕರಣ ದಾಖಲಾಗಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪೂರೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ, ಜಿಲ್ಲಾ ಸರ್ಕಾರಿ ಅಭಿಯೋಜಕರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 